ಬ್ರೇಕಿಂಗ್ ನ್ಯೂಸ್
07-07-22 07:40 pm Mangalore Correspondent ಕರಾವಳಿ
ಉಳ್ಳಾಲ, ಜು.7 : ರಾಜ್ಯದಲ್ಲಿ ಬಿಜೆಪಿ ಹತ್ತು ವರ್ಷ ಅಷ್ಟೇ ಆಡಳಿತ ನಡೆಸಿದೆ. ಕಳೆದ ಅರುವತ್ತು ವರುಷದಿಂದಲೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆಗ ಕಡಲೂ ಇತ್ತು, ಕೊರೆತನೂ ಇತ್ತು. ಕಾಂಗ್ರೆಸ್ಸೂ ಇತ್ತು. ಹಾಗಿದ್ರೂ ಕಡಲ್ಕೊರೆತಕ್ಕೆ ಪರಿಹಾರ ಯಾಕೆ ಕೈಗೊಂಡಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರಿಗೆ ಟಾಂಗ್ ನೀಡಿದ್ದಾರೆ.
ಅವರಿಂದು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ, ಉಳ್ಳಾಲದ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅವಲೋಕನ ನಡೆಸಿದರು. ಉಳ್ಳಾಲದ ಶಾಸಕ ಯು.ಟಿ.ಖಾದರ್ ಅವರು ಚುನಾವಣೆ ದೃಷ್ಟಿ ಮುಂದಿಟ್ಟು ಸುಮ್ಮನೆ ಆಪಾದನೆ ಮಾಡೋದನ್ನ ಬಿಡಲಿ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ಪ್ರದೇಶಗಳಿಗೆ ಏನ್ ಮಾಡಿದ್ದಾರೆ ಎಂದು ಜನರಿಗೆ ತಿಳಿದಿದೆ. ಸರಕಾರದ ವಿರುದ್ಧ ಟೀಕೆ, ಟಿಪ್ಪಣಿ ಸಹಜ. ನಾವು ರಾಜಕೀಯ ಮಾಡಲ್ಲ. ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಸಂತ್ರಸ್ತರಿಗೆ ಶೀಘ್ರ ಪರಿಹಾರನೂ ಒದಗಿಸುತ್ತೇವೆ. ತಜ್ಞರ ತಂಡದಿಂದ ಸಮೀಕ್ಷೆ ನಡೆಸಿ ಮುಖ್ಯಮಂತ್ರಿಗಳಲ್ಲಿ ಮಾತನಾಡಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದರು.
ಈ ಬಾರಿ ಏಳು ಜಿಲ್ಲೆಗಳಲ್ಲಿ ಬಹಳಷ್ಟು ಮಳೆ ಆಗಿದ್ದು, ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸೂಚನೆ ಕೊಟ್ಟಿದ್ದೇನೆ. ಮನೆ ಕಳಕೊಂಡವರಿಗೆ NDRF ನಿಯಮ ಪ್ರಕಾರ ಈ ಹಿಂದೆ 95,000 ಪರಿಹಾರ ಇದ್ದು ಮುಖ್ಯಂತ್ರಿಗಳಲ್ಲಿ ಮಾತನಾಡಿ ಅದನ್ನ 5 ಲಕ್ಷಕ್ಕೆ ಏರಿಸಿದ್ದೇವೆ. ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಆದೇಶಿಸಿರುವುದಾಗಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ ಸಮುದ್ರ ತೀರದ ನಿವಾಸಿಗಳ ರಕ್ಷಣೆಗೆ ನಾವು ಆದ್ಯತೆ ನೀಡುತ್ತೇವೆಯೇ ಹೊರತು ರೆಸಾರ್ಟ್ ಗಳ ರಕ್ಷಣೆಗೆ ಆದ್ಯತೆ ನೀಡಲ್ಲ ಎಂದರು.
ಬಂದರು ಸಚಿವ ಎಸ್.ಅಂಗಾರ, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ಬೋಳಿಯಾರ್, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಜೊತೆಯಲ್ಲಿದ್ದರು.
Minister Ashok in Ullal Mangalore, taunts MLA UT Khader, says what has congress done to control sea erosion during his visit in Mangaluru. He also said that people who have lost their homes and have been affected due to soil erosion will have packages from the government.
28-03-25 10:47 pm
Bangalore Correspondent
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 11:16 pm
Udupi Correspondent
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
28-03-25 09:25 pm
Mangalore Correspondent
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm