ಬ್ರೇಕಿಂಗ್ ನ್ಯೂಸ್
08-07-22 03:48 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಬಳ್ಳೂರುಗುಡ್ಡೆ ಎಂಬಲ್ಲಿ ಗುಡ್ಡ ಬಿರುಕು ಬಿಟ್ಟಿದ್ದು ಐದಾರು ಮನೆಗಳ ಮೇಲೆ ಕುಸಿದು ಬೀಳುವ ಆತಂಕ ಎದುರಾಗಿದೆ.
ರೈಲ್ವೇ ಹಳಿಯ ಪಕ್ಕದಲ್ಲೇ ಇರುವ ಗುಡ್ಡ ಭಾರೀ ಮಳೆಗೆ ಬಿರುಕು ಬಿಟ್ಟಿದ್ದು ಅಲ್ಲಿಯ ನಿವಾಸಿಗಳು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ. ಗುಡ್ಡದಲ್ಲಿ ಒತ್ತೊತ್ತಾಗಿ ಮನೆಗಳಿದ್ದು ಮೆಟ್ಟಿಲು ಇರುವಲ್ಲಿ ಮಣ್ಣು ಕುಸಿದು ಬಿದ್ದಿದೆ. ಅಬ್ದುಲ್ ರಹಮಾನ್ ಎಂಬವರ ಮನೆಯ ಸ್ಥಿತಿ ಈಗಲೋ ಆಗಲೋ ಅನ್ನುವಂತಿದೆ.


ಮಹಾನಗರ ಪಾಲಿಕೆಯ ಆಡಳಿತ ಸ್ಥಳದಲ್ಲಿ ಆತಂಕ ಎದುರಿಸುತ್ತಿರುವ ಐದು ಮನೆಗಳ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚನೆ ನೀಡಿದೆ. ಪಕ್ಕದ ಅಂಗನವಾಡಿ ಕಟ್ಟಡದಲ್ಲಿ ಇರುವಂತೆ ಸ್ಥಳೀಯ ಕಾರ್ಪೊರೇಟರ್ ಹೇಳಿದ್ದಾರಂತೆ. ಈ ನಡುವೆ, ಗುಡ್ಡ ಕುಸಿಯದಂತೆ ಬಿರುಕು ಬಿಟ್ಟಿರುವ ಜಾಗಕ್ಕೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಗುಡ್ಡ ಕುಸಿದ ಕೆಳಭಾಗದಲ್ಲಿರುವ ಮನೆಗಳ ನಿವಾಸಿಗಳು ಸಂಬಂಧಿಕರ ಮನೆಗಳಿಗೆ ತೆರಳಿ ಉಳಿದುಕೊಂಡಿದ್ದಾರೆ.


30 ವರ್ಷಗಳಿಗೂ ಹೆಚ್ಚು ಕಾಲದಿಂದ ಇದ್ದೇವೆ. ಈಗ ಇಂತಹ ಸ್ಥಿತಿ ಬಂದಿದೆ. ಈವರೆಗೂ ಗುಡ್ಡ ಕುಸಿದಿರಲಿಲ್ಲ. ಗುಡ್ಡ ಕುಸಿಯದಂತೆ ಇಲ್ಲಿ ತುರ್ತಾಗಿ ಕಾಂಕ್ರೀಟ್ ತಡೆಗೋಡೆ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಐದಾರು ಮನೆಗಳ ನಿವಾಸಿಗಳು ಅಪಾಯ ಭೀತಿಯಲ್ಲಿದ್ದು ತಾತ್ಕಾಲಿಕವಾಗಿ ಬೇರೆ ಕಡೆ ಉಳಿದುಕೊಂಡಿದ್ದಾರೆ. ಮಳೆ ತೀವ್ರಗೊಂಡರೆ ಮನೆಗಳು ಕುಸಿಯುವ ಸಾಧ್ಯತೆ ಇದೆ.
Mangalore Landslide fear in Adyar Kannur area, residents in trouble.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm