ಬ್ರೇಕಿಂಗ್ ನ್ಯೂಸ್
08-07-22 06:33 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ಹೆದ್ದಾರಿ ಕ್ರಾಸ್ ಮಾಡಲು ನಿಂತಿದ್ದ ಓಮ್ನಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದು ಕಾರು ಅಪ್ಪಚ್ಚಿಯಾದ ಘಟನೆ ಸುರತ್ಕಲ್ ಬಳಿಯ ಹೊನ್ನಕಟ್ಟೆ ಜಂಕ್ಷನ್ನಲ್ಲಿ ನಡೆದಿದ್ದು ಕಾರು ಚಾಲಕ ದುರಂತ ಸಾವು ಕಂಡಿದ್ದಾರೆ.
ಓಮ್ನಿ ಚಾಲಕ ಹೊನ್ನಕಟ್ಟೆಯಲ್ಲಿ ಬಲಕ್ಕೆ ರಸ್ತೆ ಕ್ರಾಸ್ ಮಾಡುವ ಸಲುವಾಗಿ ವಾಹನ ನಿಲ್ಲಿಸಿದ್ದರು. ಇದೇ ವೇಳೆ, ಹಿಂದಿನಿಂದ ಹೆದ್ದಾರಿಯಲ್ಲಿ ಬಂದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿನ ಮೇಲೆ ಮುಗುಚಿ ಬಿದ್ದಿದೆ. ಓಮ್ನಿ ಕಾರು ಅಪ್ಪಚ್ಚಿಯಾಗಿದ್ದು ಬಳಿಕ ಪೊಲೀಸರು ಕ್ರೇನ್ ಬಳಸಿ ಕಾರನ್ನು ಹೊರಗೆಳೆದಿದ್ದಾರೆ. ಕಾರಿನಲ್ಲಿದ್ದ ಚಿತ್ರಾಪುರ ನಿವಾಸಿ ಲೋಕೇಶ್ ಎಂಬವರು ಗಂಭೀರ ಗಾಯಗೊಂಡ ಪ್ರಜ್ಞೆ ಕಳಕೊಂಡ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಯತ್ನ ನಡೆದರೂ, ಬದುಕಲಿಲ್ಲ.


ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿ ತಿರುವು ತೆಗೆದಿದ್ದರಿಂದ ಅಪಘಾತ ಆಗಿದೆ ಎನ್ನಲಾಗುತ್ತಿದ್ದು ಅಜಾಗರೂಕ ಚಾಲನೆಯೇ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಎಡದ ಭಾಗಕ್ಕೆ ಲಾರಿ ವಾಲಿ ನಿಯಂತ್ರಣ ಕಳಕೊಂಡು ಮಗುಚಿದೆ.

ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಲಾರಿಯನ್ನು ಕ್ರೇನ್ ಬಳಸಿ ಎತ್ತಿ ಓಮ್ನಿ ಚಾಲಕನನ್ನು ಆಸ್ಪತ್ರೆಗೆ ಸೇರಿಸುವಲ್ಲಿ ನೇರವಾಗಿದ್ದಾರೆ.
ಕಾರಿನ ಮುಂಭಾಗದಲ್ಲಿ ನಿಂತಿದ್ದ ಸ್ಕೂಟರ್ ಗೂ ಹಾನಿಯಾಗಿದ್ದು, ಸವಾರ ಸ್ಕೂಟರ್ ಬಿಟ್ಟು ಹಾರಿದ ಪರಿಣಾಮ ಬದುಕುಳಿದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
A man died after a truck carrying goods fell upon an Omni van at Honnakatte junction in Surathkal on Friday July 8. The deceased is identified as Lokesh Kullal (38). The incident took place in the afternoon on Friday.The van was completely crushed in the incident. Mangaluru North traffic police who arrived at the spot, shifted the truck and the van with the help of a crane.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm