ಬ್ರೇಕಿಂಗ್ ನ್ಯೂಸ್
09-07-22 10:41 pm Mangalore Correspondent ಕರಾವಳಿ
ಮಂಗಳೂರು, ಜು.9 : ದ.ಕ. ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕೆ ದೃಷ್ಟಿಯಿಂದ ರಜೆ ನೀಡಲಾಗುತ್ತಿದೆ. ಜಿಲ್ಲಾಡಳಿತದ ರಜೆ ಆದೇಶವನ್ನು ಸಂಬಂಧಿಸಿದ ಎಲ್ಲ ಶಾಲೆ, ಕಾಲೇಜುಗಳ ಆಡಳಿತ ಮಂಡಳಿವರು ಕಟ್ಟುನಿಟ್ಟಾಗಿ ಪಾಲಿಸಬೇಕು. ಅದಕ್ಕೆ ಯಾವುದೇ ಇಂಜಿನಿಯರಿಂಗ್ ಕಾಲೇಜು ಕೂಡ ಹೊರತಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಾಕೀತು ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರ ಜೊತೆಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆ ಹೇಗಿದೆ ಎನ್ನುವ ಬಗ್ಗೆ ಮೊದಲು ಸಮೀಕ್ಷೆ ಮಾಡಬೇಕು. ಯಾವ ಹಳ್ಳಿ, ಹಾಸ್ಟೆಲ್ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು, ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು. ಆದೇಶ ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲಾಡಳಿತ ಒಂದು ಬಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ. ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಮಂಗಳೂರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಗುರುಪ್ರಸಾದ್, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಸೇರಿದಂತೆ ವಿವಿಧ ಕಾಲೇಜಿನ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು ಉಪಸ್ಥಿತರಿದ್ದರು.
Mangalore Dc Rajendra slams engineering colleges for not granting holiday to students amid rains.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm