ಬ್ರೇಕಿಂಗ್ ನ್ಯೂಸ್
10-07-22 11:11 am Mangalore Correspondent ಕರಾವಳಿ
ಪುತ್ತೂರು, ಜುಲೈ 10: ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರೊಂದು ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಕಾರು ವೇಗವಾಗಿ ಬಂದು ಸೇತುವೆಯ ತಡೆಗೋಡೆ ದಾಟಿ ನೀರಿಗೆ ಬಿದ್ದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಾರಿನ ಬಾನೆಟ್ ಭಾಗ ಹೊಳೆಯಲ್ಲಿ ಬೆಳಗ್ಗೆ ಪತ್ತೆಯಾಗಿದ್ದು ಅಗ್ನಿಶಾಮಕ ದಳ ಸಿಬಂದಿ, ಪೊಲೀಸರು, ಸ್ಥಳೀಯರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಸೇತುವೆಗೆ ಪ್ರತ್ಯೇಕ ತಡೆಗೋಡೆ ಇಲ್ಲದಿರುವುದರಿಂದ ತಿರುವು ರಸ್ತೆಯಲ್ಲಿ ವೇಗವಾಗಿ ಬಂದ ಕಾರು ನೇರವಾಗಿ ನದಿಗೆ ಬಿದ್ದಿದೆ.


800 ಮಾರುತಿ ಕಾರು ಎನ್ನಲಾಗುತ್ತಿದ್ದು ಗುತ್ತಿಗಾರು ಮೂಲದ್ದೆಂದು ಹೇಳಲಾಗುತ್ತಿದೆ. ಕಾರಿನಲ್ಲಿ ಮೂವರು ಇದ್ದರೆಂದು ಹೇಳಲಾಗುತ್ತಿದೆ. ಆದರೆ ಕಾರಿನಲ್ಲಿ ಇದ್ದ ಜನರ ಬಗ್ಗೆ, ಕಾರು ಎಲ್ಲಿಯದು ಎನ್ನುವ ಬಗ್ಗೆ ಮಾಹಿತಿ ಇಲ್ಲ. ಸ್ಥಳೀಯರು ಕುತೂಹಲದಿಂದ ಸ್ಥಳದಲ್ಲಿ ಸೇರುತ್ತಿದ್ದಾರೆ.

ಸುಬ್ರಹ್ಮಣ್ಯ - ಪುತ್ತೂರು- ಮಂಜೇಶ್ವರ ರಾಜ್ಯ ಹೆದ್ದಾರಿಯಾಗಿದ್ದು ಕಾಣಿಯೂರು ಮೂಲಕ ಹಾದು ಹೋಗುತ್ತದೆ. ಕಾರು ಪುತ್ತೂರು ಕಡೆಯಿಂದ ವೇಗವಾಗಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿತ್ತು. ಅಗ್ನಿಶಾಮಕ ದಳ ಸಿಬಂದಿ ಹೊಳೆಯಲ್ಲಿ ಬೋಟ್ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯವಾಗಿ ಗೌರಿ ಹೊಳೆಯೆಂದು ಕರೆಯಲ್ಪಡುವ ಈ ಹೊಳೆ ಮುಂದೆ ಕುಮಾರಧಾರಾ ನದಿಯನ್ನು ಸೇರುತ್ತದೆ. ಭಾರೀ ಮಳೆಯಿಂದಾಗಿ ಹೊಳೆ ಉಕ್ಕಿ ಹರಿಯುತ್ತಿದೆ. ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆಯೂ ವ್ಯಕ್ತವಾಗಿದೆ.
Puttur heavy rains car gets washed away after falling from bridge in Mangalore. The incident has occurred last night and it is said there were there people inside the car.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm