ಬ್ರೇಕಿಂಗ್ ನ್ಯೂಸ್
10-07-22 11:11 am Mangalore Correspondent ಕರಾವಳಿ
ಪುತ್ತೂರು, ಜುಲೈ 10: ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರೊಂದು ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಕಾರು ವೇಗವಾಗಿ ಬಂದು ಸೇತುವೆಯ ತಡೆಗೋಡೆ ದಾಟಿ ನೀರಿಗೆ ಬಿದ್ದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಾರಿನ ಬಾನೆಟ್ ಭಾಗ ಹೊಳೆಯಲ್ಲಿ ಬೆಳಗ್ಗೆ ಪತ್ತೆಯಾಗಿದ್ದು ಅಗ್ನಿಶಾಮಕ ದಳ ಸಿಬಂದಿ, ಪೊಲೀಸರು, ಸ್ಥಳೀಯರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಸೇತುವೆಗೆ ಪ್ರತ್ಯೇಕ ತಡೆಗೋಡೆ ಇಲ್ಲದಿರುವುದರಿಂದ ತಿರುವು ರಸ್ತೆಯಲ್ಲಿ ವೇಗವಾಗಿ ಬಂದ ಕಾರು ನೇರವಾಗಿ ನದಿಗೆ ಬಿದ್ದಿದೆ.
800 ಮಾರುತಿ ಕಾರು ಎನ್ನಲಾಗುತ್ತಿದ್ದು ಗುತ್ತಿಗಾರು ಮೂಲದ್ದೆಂದು ಹೇಳಲಾಗುತ್ತಿದೆ. ಕಾರಿನಲ್ಲಿ ಮೂವರು ಇದ್ದರೆಂದು ಹೇಳಲಾಗುತ್ತಿದೆ. ಆದರೆ ಕಾರಿನಲ್ಲಿ ಇದ್ದ ಜನರ ಬಗ್ಗೆ, ಕಾರು ಎಲ್ಲಿಯದು ಎನ್ನುವ ಬಗ್ಗೆ ಮಾಹಿತಿ ಇಲ್ಲ. ಸ್ಥಳೀಯರು ಕುತೂಹಲದಿಂದ ಸ್ಥಳದಲ್ಲಿ ಸೇರುತ್ತಿದ್ದಾರೆ.
ಸುಬ್ರಹ್ಮಣ್ಯ - ಪುತ್ತೂರು- ಮಂಜೇಶ್ವರ ರಾಜ್ಯ ಹೆದ್ದಾರಿಯಾಗಿದ್ದು ಕಾಣಿಯೂರು ಮೂಲಕ ಹಾದು ಹೋಗುತ್ತದೆ. ಕಾರು ಪುತ್ತೂರು ಕಡೆಯಿಂದ ವೇಗವಾಗಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿತ್ತು. ಅಗ್ನಿಶಾಮಕ ದಳ ಸಿಬಂದಿ ಹೊಳೆಯಲ್ಲಿ ಬೋಟ್ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯವಾಗಿ ಗೌರಿ ಹೊಳೆಯೆಂದು ಕರೆಯಲ್ಪಡುವ ಈ ಹೊಳೆ ಮುಂದೆ ಕುಮಾರಧಾರಾ ನದಿಯನ್ನು ಸೇರುತ್ತದೆ. ಭಾರೀ ಮಳೆಯಿಂದಾಗಿ ಹೊಳೆ ಉಕ್ಕಿ ಹರಿಯುತ್ತಿದೆ. ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆಯೂ ವ್ಯಕ್ತವಾಗಿದೆ.
Puttur heavy rains car gets washed away after falling from bridge in Mangalore. The incident has occurred last night and it is said there were there people inside the car.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm