ಬ್ರೇಕಿಂಗ್ ನ್ಯೂಸ್
10-07-22 11:11 am Mangalore Correspondent ಕರಾವಳಿ
ಪುತ್ತೂರು, ಜುಲೈ 10: ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರೊಂದು ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಕಾರು ವೇಗವಾಗಿ ಬಂದು ಸೇತುವೆಯ ತಡೆಗೋಡೆ ದಾಟಿ ನೀರಿಗೆ ಬಿದ್ದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಾರಿನ ಬಾನೆಟ್ ಭಾಗ ಹೊಳೆಯಲ್ಲಿ ಬೆಳಗ್ಗೆ ಪತ್ತೆಯಾಗಿದ್ದು ಅಗ್ನಿಶಾಮಕ ದಳ ಸಿಬಂದಿ, ಪೊಲೀಸರು, ಸ್ಥಳೀಯರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಸೇತುವೆಗೆ ಪ್ರತ್ಯೇಕ ತಡೆಗೋಡೆ ಇಲ್ಲದಿರುವುದರಿಂದ ತಿರುವು ರಸ್ತೆಯಲ್ಲಿ ವೇಗವಾಗಿ ಬಂದ ಕಾರು ನೇರವಾಗಿ ನದಿಗೆ ಬಿದ್ದಿದೆ.


800 ಮಾರುತಿ ಕಾರು ಎನ್ನಲಾಗುತ್ತಿದ್ದು ಗುತ್ತಿಗಾರು ಮೂಲದ್ದೆಂದು ಹೇಳಲಾಗುತ್ತಿದೆ. ಕಾರಿನಲ್ಲಿ ಮೂವರು ಇದ್ದರೆಂದು ಹೇಳಲಾಗುತ್ತಿದೆ. ಆದರೆ ಕಾರಿನಲ್ಲಿ ಇದ್ದ ಜನರ ಬಗ್ಗೆ, ಕಾರು ಎಲ್ಲಿಯದು ಎನ್ನುವ ಬಗ್ಗೆ ಮಾಹಿತಿ ಇಲ್ಲ. ಸ್ಥಳೀಯರು ಕುತೂಹಲದಿಂದ ಸ್ಥಳದಲ್ಲಿ ಸೇರುತ್ತಿದ್ದಾರೆ.

ಸುಬ್ರಹ್ಮಣ್ಯ - ಪುತ್ತೂರು- ಮಂಜೇಶ್ವರ ರಾಜ್ಯ ಹೆದ್ದಾರಿಯಾಗಿದ್ದು ಕಾಣಿಯೂರು ಮೂಲಕ ಹಾದು ಹೋಗುತ್ತದೆ. ಕಾರು ಪುತ್ತೂರು ಕಡೆಯಿಂದ ವೇಗವಾಗಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿತ್ತು. ಅಗ್ನಿಶಾಮಕ ದಳ ಸಿಬಂದಿ ಹೊಳೆಯಲ್ಲಿ ಬೋಟ್ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯವಾಗಿ ಗೌರಿ ಹೊಳೆಯೆಂದು ಕರೆಯಲ್ಪಡುವ ಈ ಹೊಳೆ ಮುಂದೆ ಕುಮಾರಧಾರಾ ನದಿಯನ್ನು ಸೇರುತ್ತದೆ. ಭಾರೀ ಮಳೆಯಿಂದಾಗಿ ಹೊಳೆ ಉಕ್ಕಿ ಹರಿಯುತ್ತಿದೆ. ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆಯೂ ವ್ಯಕ್ತವಾಗಿದೆ.
Puttur heavy rains car gets washed away after falling from bridge in Mangalore. The incident has occurred last night and it is said there were there people inside the car.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm