ಬ್ರೇಕಿಂಗ್ ನ್ಯೂಸ್
10-07-22 02:07 pm Mangalore Correspondent ಕರಾವಳಿ
ಪುತ್ತೂರು, ಜುಲೈ 10: ಕಾಣಿಯೂರು ಹೊಳೆಗೆ ಬಿದ್ದ ಕಾರನ್ನು ಅಗ್ನಿಶಾಮಕ ಸಿಬಂದಿ ಪತ್ತೆ ಮಾಡಿದ್ದು ಹಗ್ಗ ಕಟ್ಟಿ ಹೊಳೆಯಿಂದ ಮೇಲಕ್ಕೆ ಎಳೆದಿದ್ದಾರೆ. ಅದರಲ್ಲಿ ಇಬ್ಬರು ಯುವಕರಿದ್ದು ವಿಟ್ಲದ ನಿವಾಸಿಗಳೆಂದು ಪತ್ತೆ ಮಾಡಲಾಗಿದೆ.
ಕಾರಿನಲ್ಲಿದ್ದವರು ವಿಟ್ಲ ಬಳಿಯ ಕುಂಡಡ್ಕ ನಿವಾಸಿ ಧನುಷ್ (26) ಮತ್ತು ಆತನ ಸೋದರ ಸಂಬಂಧಿ ಮಂಜೇಶ್ವರ ಮೂಲದ ಧನುಷ್ (21) ಎಂದು ಪತ್ತೆ ಮಾಡಲಾಗಿದೆ. ಅವರ ಪತ್ತೆಗಾಗಿ ಸ್ಥಳೀಯ ಮುಳುಗು ತಜ್ಞರು, ಅಗ್ನಿಶಾಮಕ ದಳ ಹುಡುಕಾಟ ಕಾರ್ಯಾಚರಣೆ ಮುಂದುವರಿಸಿದೆ.


ಕಾರ್ಯಾಚರಣೆ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಮಸೀದಿ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಕಟ್ಟಡಗಳ ಮೇಲೆ ನಿಂತು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ಜನರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.


ಬೈತಡ್ಕ ಸೇತುವೆಯಿಂದ ಕಾರು ಹೊಳೆಗೆ ಬಿದ್ದಿದ್ದು ಅಲ್ಲಿಂದ 500 ಮೀಟರ್ ದೂರದಲ್ಲಿ ಕಾರು ಪತ್ತೆಯಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿದ್ದು ಸ್ಥಳೀಯರು, ಪೊಲೀಸರು ಹಗ್ಗ ಕಟ್ಟಿ ಮೇಲಕ್ಕೆತ್ತಿದ್ದಾರೆ. ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಹೊಳೆಗೆ ಬಿದ್ದಿತ್ತು.


ಇಬ್ಬರು ಯುವಕರು ವಿಟ್ಲ ಕಡೆಯಿಂದ ಶನಿವಾರ ರಾತ್ರಿ ಪುತ್ತೂರಿಗೆ ತೆರಳಿದ್ದರು. ಬೆಳಗ್ಗೆಯೇ ಕಾರು ಬಿದ್ದಿರುವುದು ಗೊತ್ತಾಗಿದೆ. ಇಬ್ಬರದ್ದೂ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಘಟನಾ ಸ್ಥಳಕ್ಕೆ ಬಂದಿದ್ದ ಯುವಕರ ಸಂಬಂಧಿಕರು ತಿಳಿಸಿದ್ದಾರೆ.


ಶನಿವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಕಾರು ಕಾಣಿಯೂರಿನ ಬೈತಡ್ಕದಲ್ಲಿ ಹೊಳೆಗೆ ಬಿದ್ದಿತ್ತು. ಈ ವಿಚಾರ ಯಾರದೇ ಗಮನಕ್ಕೆ ಬಂದಿರಲಿಲ್ಲ. ಬೆಳಗ್ಗೆ ಕಾರಿನ ಬಾನೆಟ್ ಭಾಗ ಹೊಳೆಯಲ್ಲಿ ಕಂಡುಬಂದಿದ್ದು ಸ್ಥಳೀಯರು ಪಕ್ಕದ ಮಸೀದಿ ಕಟ್ಟಡದ ಸಿಸಿಟಿವಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ, ಮಸೀದಿ ಸಿಸಿ ಕ್ಯಾಮರಾದಲ್ಲಿ ಕಾರು ವೇಗವಾಗಿ ಬಂದು ಹೊಳೆಗೆ ಬೀಳುತ್ತಿರುವ ದೃಶ್ಯ ಸೆರೆಯಾಗಿತ್ತು. ಕಾಣಿಯೂರು ಹೊಳೆ ಮುಂದೆ ಕುಮಾರಧಾರಾ ನದಿಗೆ ಸೇರುತ್ತಿದ್ದು ಮಳೆಯಿಂದಾಗಿ ಉಕ್ಕಿ ಹರಿಯುತ್ತಿದೆ. ಇಬ್ಬರು ಯುವಕರು ಹೊಳೆಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಮಧ್ಯರಾತ್ರಿ ಹೊಳೆಗೆ ಬಿದ್ದ ಕಾರು ; ಕಾಣಿಯೂರು ಹೊಳೆಯಲ್ಲಿ ಅಗ್ನಿಶಾಮಕ ದಳ ಹುಡುಕಾಟ, ಕಾರಿನಲ್ಲಿ ಮೂವರಿದ್ದ ಶಂಕೆ !
Speeding car falls into river in Puttur, car found, two youths from Vitla missing, search is on. Last night as they were passing a bridge the car lost control and fell into the river. The fire brigade team after extreme search in the rains found the car. But the youths are said to be washed away due to heavy rains.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm