ಬ್ರೇಕಿಂಗ್ ನ್ಯೂಸ್
11-07-22 12:43 pm Mangalore Correspondent ಕರಾವಳಿ
ಉಳ್ಳಾಲ, ಜು.11: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ ಎರಡು ವರ್ಷಗಳ ಹಿಂದೆ ಮುಕ್ಕಚ್ಚೇರಿ ನಿವಾಸಿ ಇರ್ಫಾನ್ ಜೊತೆ ವಿವಾಹವಾಗಿತ್ತು. ದಂಪತಿಗೆ 8 ತಿಂಗಳ ಗಂಡು ಮಗು ಇದೆ. ವಿವಾಹ ಆದ ಆರಂಭದಲ್ಲೇ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಿರಿಯರು ಸೇರಿ ಮಾತುಕತೆ ನಡೆಸಿ ದಂಪತಿ ನಡುವಿನ ಕಲಹ ಶಮನಗೊಳಿಸುತ್ತಿದ್ದರು. ಭಾನುವಾರ ಸಂಜೆಯೂ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.


ಘಟನೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಂಶೀರಾ ಸಹೋದರಿಗೆ ಆಕೆಯ ಗಂಡನ ಮನೆಯವರಿಂದ ಫೋನ್ ಕರೆ ಬಂದಿದ್ದು ಜಂಶೀರಾ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಆದರೆ ಮನೆಮಗಳ ನಿಗೂಢ ಸಾವಿನ ಬಗ್ಗೆ ಜಂಶೀರಾ ಪೋಷಕರು ಶಂಕೆ ವ್ಯಕ್ತ ಪಡಿಸಿದ್ದಾರೆ. ಮೃತ ಜಂಶೀರಳ ಮೃತದೇಹವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಹಿಂದಿನ ಅಸಲಿಯತ್ತು ಬೆಳಕಿಗೆ ಬರಲಿದೆ ಎನ್ನುವ ಮಾಹಿತಿಗಳಿವೆ. ಈ ನಡುವೆ, ಉಳ್ಳಾಲ ಪೊಲೀಸರು ಮೃತ ಜಂಶೀರಾಳ ಪತಿ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Mangalore 25 year old Woman found dead mysteriously in husbands house in Ullal, murder suspected. The deceased has been identified as Jamsira. Ullal police have taken husband into custody and are investigating.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm