ಬ್ರೇಕಿಂಗ್ ನ್ಯೂಸ್
12-07-22 12:46 pm Mangalore Correspondent ಕರಾವಳಿ
ಪುತ್ತೂರು, ಜುಲೈ 12 : ಕಾಣಿಯೂರು ಹೊಳೆಗೆ ಬಿದ್ದ ಕಾರಿನಲ್ಲಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ ಜಾಗದಿಂದ 500 ಮೀಟರ್ ದೂರದಲ್ಲಿ ಎರಡೂ ಶವಗಳು ಪತ್ತೆಯಾಗಿವೆ.
ಜುಲೈ 10ರ ನಸುಕಿನಲ್ಲಿ ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರು ಹೊಳೆಗೆ ಬಿದ್ದಿತ್ತು. ಕಾರಿನಲ್ಲಿದ್ದ ವಿಟ್ಲದ ಧನುಷ್ (26)ಮತ್ತು ಕನ್ಯಾನ ನಿವಾಸಿ ಧನಂಜಯ(24) ಎಂಬವರು ನಾಪತ್ತೆಯಾಗಿದ್ದರು. ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋದ ಬಗ್ಗೆ ಶಂಕೆ ವ್ತಕ್ತವಾಗಿತ್ತು.


ಭಾನುವಾರ ಬೆಳಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯರು, ಪೊಲೀಸರು, ಅಗ್ನಿಶಾಮಕ ಸಿಬಂದಿ ಹುಡುಕಾಟ ನಡೆಸಿದ್ದರು. ಎರಡು ದಿನ ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಬಹುತೇಕ ಹೊಳೆಯಲ್ಲಿ ಕೊಚ್ಚಿ ಹೋಗಿ ಮುಂದೆ ಕುಮಾರಧಾರಾ ನದಿಗೆ ಸೇರಿದ್ದಿರಬಹುದೆಂಬ ಶಂಕೆ ಇತ್ತು. ಆದರೆ ಸೋಮವಾರ ಮಳೆ ಕಡಿಮೆಯಾಗಿತ್ತು. ಇದರಿಂದಾಗಿ ಹೊಳೆಯಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿತ್ತು.


ಇಂದು ಬೆಳಗ್ಗೆ ಸ್ಥಳೀಯರು ಹೊಳೆಯಲ್ಲಿ ಗಮನಿಸಿದಾಗ, ಬೈತಡ್ಕ ಸೇತುವೆಯಿಂದ ಅನತಿ ದೂರದಲ್ಲಿ ಮರದ ದಿಮ್ಮಿಯ ಎಡೆಯಲ್ಲಿ ಸಿಕ್ಕಿಕೊಂಡ ರೀತಿ ಒಂದು ಶವ ಪತ್ತೆಯಾಗಿದೆ. ಆನಂತರ ಹತ್ತು ಗಂಟೆ ವೇಳೆಗೆ, ಅಲ್ಲಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಶವವೂ ಸಿಕ್ಕಿದೆ. ಎರಡೂ ಶವಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಸ್ಟ್ ಮಾರ್ಟಂ ನಡೆಸಲು ವೈದ್ಯರ ವಶಕ್ಕೆ ನೀಡಿದ್ದಾರೆ.
ಹೊಳೆಗೆ ಬಿದ್ದ ಕಾರು ಪತ್ತೆ ; ವಿಟ್ಲದ ಯುವಕರಿಬ್ಬರು ಕೊಚ್ಚಿ ಹೋಗಿರುವ ಶಂಕೆ, ಸ್ಥಳದಲ್ಲಿ ಜನಸಾಗರ !
ಮಧ್ಯರಾತ್ರಿ ಹೊಳೆಗೆ ಬಿದ್ದ ಕಾರು ; ಕಾಣಿಯೂರು ಹೊಳೆಯಲ್ಲಿ ಅಗ್ನಿಶಾಮಕ ದಳ ಹುಡುಕಾಟ, ಕಾರಿನಲ್ಲಿ ಮೂವರಿದ್ದ ಶಂಕೆ !
Puttur Speeding car falls into river, missing bodies of the two found. The car fell on Sunday after it lost its control.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm