ಬ್ರೇಕಿಂಗ್ ನ್ಯೂಸ್
12-07-22 12:46 pm Mangalore Correspondent ಕರಾವಳಿ
ಪುತ್ತೂರು, ಜುಲೈ 12 : ಕಾಣಿಯೂರು ಹೊಳೆಗೆ ಬಿದ್ದ ಕಾರಿನಲ್ಲಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ ಜಾಗದಿಂದ 500 ಮೀಟರ್ ದೂರದಲ್ಲಿ ಎರಡೂ ಶವಗಳು ಪತ್ತೆಯಾಗಿವೆ.
ಜುಲೈ 10ರ ನಸುಕಿನಲ್ಲಿ ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರು ಹೊಳೆಗೆ ಬಿದ್ದಿತ್ತು. ಕಾರಿನಲ್ಲಿದ್ದ ವಿಟ್ಲದ ಧನುಷ್ (26)ಮತ್ತು ಕನ್ಯಾನ ನಿವಾಸಿ ಧನಂಜಯ(24) ಎಂಬವರು ನಾಪತ್ತೆಯಾಗಿದ್ದರು. ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋದ ಬಗ್ಗೆ ಶಂಕೆ ವ್ತಕ್ತವಾಗಿತ್ತು.


ಭಾನುವಾರ ಬೆಳಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯರು, ಪೊಲೀಸರು, ಅಗ್ನಿಶಾಮಕ ಸಿಬಂದಿ ಹುಡುಕಾಟ ನಡೆಸಿದ್ದರು. ಎರಡು ದಿನ ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಬಹುತೇಕ ಹೊಳೆಯಲ್ಲಿ ಕೊಚ್ಚಿ ಹೋಗಿ ಮುಂದೆ ಕುಮಾರಧಾರಾ ನದಿಗೆ ಸೇರಿದ್ದಿರಬಹುದೆಂಬ ಶಂಕೆ ಇತ್ತು. ಆದರೆ ಸೋಮವಾರ ಮಳೆ ಕಡಿಮೆಯಾಗಿತ್ತು. ಇದರಿಂದಾಗಿ ಹೊಳೆಯಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿತ್ತು.


ಇಂದು ಬೆಳಗ್ಗೆ ಸ್ಥಳೀಯರು ಹೊಳೆಯಲ್ಲಿ ಗಮನಿಸಿದಾಗ, ಬೈತಡ್ಕ ಸೇತುವೆಯಿಂದ ಅನತಿ ದೂರದಲ್ಲಿ ಮರದ ದಿಮ್ಮಿಯ ಎಡೆಯಲ್ಲಿ ಸಿಕ್ಕಿಕೊಂಡ ರೀತಿ ಒಂದು ಶವ ಪತ್ತೆಯಾಗಿದೆ. ಆನಂತರ ಹತ್ತು ಗಂಟೆ ವೇಳೆಗೆ, ಅಲ್ಲಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಶವವೂ ಸಿಕ್ಕಿದೆ. ಎರಡೂ ಶವಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಸ್ಟ್ ಮಾರ್ಟಂ ನಡೆಸಲು ವೈದ್ಯರ ವಶಕ್ಕೆ ನೀಡಿದ್ದಾರೆ.
ಹೊಳೆಗೆ ಬಿದ್ದ ಕಾರು ಪತ್ತೆ ; ವಿಟ್ಲದ ಯುವಕರಿಬ್ಬರು ಕೊಚ್ಚಿ ಹೋಗಿರುವ ಶಂಕೆ, ಸ್ಥಳದಲ್ಲಿ ಜನಸಾಗರ !
ಮಧ್ಯರಾತ್ರಿ ಹೊಳೆಗೆ ಬಿದ್ದ ಕಾರು ; ಕಾಣಿಯೂರು ಹೊಳೆಯಲ್ಲಿ ಅಗ್ನಿಶಾಮಕ ದಳ ಹುಡುಕಾಟ, ಕಾರಿನಲ್ಲಿ ಮೂವರಿದ್ದ ಶಂಕೆ !
Puttur Speeding car falls into river, missing bodies of the two found. The car fell on Sunday after it lost its control.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm