ಬ್ರೇಕಿಂಗ್ ನ್ಯೂಸ್
12-07-22 09:46 pm Mangalore Correspondent ಕರಾವಳಿ
ಮಂಗಳೂರು, ಜುಲೈ 12: ಬಂಟ್ವಾಳ ತಾಲೂಕಿನ ಪಂಜಿಕಲ್ಲಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿಯೇ ಮೂರು ಕಾರ್ಮಿಕರು ಸಾವನ್ನಪ್ಪುವಂತಾಗಿದೆ. ದುರಂತ ನಡೆದ ಸಂದರ್ಭದಲ್ಲಿ ನಾಲ್ಕು ಗಂಟೆಗಳ ಕಾಲ ರಕ್ಷಣಾ ಕಾರ್ಯಕ್ಕೆ ಬಂದಿರಲಿಲ್ಲ. ಸ್ಥಳೀಯರು ಇಬ್ಬರನ್ನು ರಕ್ಷಿಸಿ, ಆಸ್ಪತ್ರೆಗೆ ಒಯ್ದರೂ, ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿಸಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ವೇಳೆ ಈ ಬಗ್ಗೆ ಮಾಹಿತಿ ನೀಡಿದ ರಮಾನಾಥ ರೈ, ದುರಂತದ ಸಂದರ್ಭದಲ್ಲಿ ತಾಲೂಕು ಆಡಳಿತವಾಗಲೀ, ಜಿಲ್ಲಾಡಳಿತವಾಗಲೀ ಸರಿಯಾಗಿ ಸ್ಪಂದಿಸಲಿಲ್ಲ. ಒಬ್ಬರನ್ನು ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಯಾರು ಬಿಲ್ ಕೊಡುವುದೆಂದು ಹೇಳಿ ಚಿಕಿತ್ಸೆಗೆ ನಿರಾಕರಿಸಲಾಗಿತ್ತು. ಆನಂತರ ಮಂಗಳಾ ಆಸ್ಪತ್ರೆಗೆ ಒಯ್ದು ಅಲ್ಲಿಯೂ ನಿರಾಕರಿಸಿ, ಕೊನೆಗೆ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ವಿಳಂಬವಾಗಿದ್ದರಿಂದ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತ ಸ್ಪಂದಿಸಿ ಚಿಕಿತ್ಸೆಯ ಭರವಸೆ ನೀಡುತ್ತಿದ್ದರೆ ಇಂತಹ ಸ್ಥಿತಿ ಆಗುತ್ತಿರಲಿಲ್ಲ.


ಸ್ಥಳೀಯರೇ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಮೊದಲಿಗೆ ಕರೆದೊಯ್ದಿದ್ದರು. ಅಲ್ಲಿ ವೈದ್ಯರಿಲ್ಲದೆ ಚಿಕಿತ್ಸೆ ಲಭಿಸಿರಲಿಲ್ಲ. ದುರಂತ ನಡೆದಾಗ ಸ್ಥಳಕ್ಕೆ ವೈದ್ಯರ ನಿಯೋಗವನ್ನೂ ಕಳಿಸಿಕೊಟ್ಟಿರಲಿಲ್ಲ. ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂತಹ ಸ್ಥಿತಿಯಾಗಿದೆ. ಜಿಲ್ಲೆಯಲ್ಲಿ ಮನೆ ಕುಸಿತ, ಗುಡ್ಡ ಕುಸಿತ ಆಗಿರುವಲ್ಲಿ ಪ್ರತ್ಯೇಕ ವಾಸವಿರಲು ಸೂಚಿಸಲಾಗಿದೆ. ಆದರೆ ಅವರಿಗೆ ಜಿಲ್ಲಾಡಳಿತದಿಂದ ಯಾವುದೇ ವ್ಯವಸ್ಥೆಯನ್ನು ಮಾಡಿಲ್ಲ ಎಂದು ರಮಾನಾಥ ರೈ ಹೇಳಿದರು.

ರಾಜ್ಯ ಸರಕಾರದ ಸ್ಥಿತಿ ಹೇಗಿದೆ ಎಂದರೆ, ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಮೂರು ವರ್ಷಗಳ ಹಿಂದೆ ನೆರೆ ಬಂದು ನಿರಾಶ್ರಿತರಾದವರು ಈಗಲೂ ಶೆಡ್ ನಲ್ಲಿದ್ದಾರೆ. ರಾಜ್ಯ ಸರಕಾರ ಪರಿಹಾರ ಕ್ರಮ ಕೈಗೊಳ್ಳಲು ಒಂದೋ ವಿಪಕ್ಷದವರು ಪ್ರತಿಭಟನೆ ಮಾಡಬೇಕು, ಇಲ್ಲವೇ ಮಾಧ್ಯಮದವರು ಸುದ್ದಿ ಮಾಡಿ ಬಿಸಿ ಮುಟ್ಟಿಸಬೇಕು ಎನ್ನುವಂತಾಗಿದೆ. ಇದೊಂದು ನಿರ್ಜೀವ ಸರಕಾರ ಅನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ ಎಂದರು ರಮಾನಾಥ ರೈ.
ಭಾರೀ ಮಳೆಗೆ ವಗ್ಗದಲ್ಲಿ ಗುಡ್ಡ ಕುಸಿತ ; ಶೆಡ್ ನೆಲಸಮ, ಓರ್ವ ಕಾರ್ಮಿಕ ಸಾವು
Ramanath Rai slams district administration for the death of three labourers due to a landslide in Bantwal.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm