ಬ್ರೇಕಿಂಗ್ ನ್ಯೂಸ್
02-10-20 09:56 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 02: ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗು ಇದಕ್ಕೆ ಅಲ್ಲಿನ ಸರಕಾರ ನಡೆದುಕೊಂಡ ರೀತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಲಾಲ್ ಬಾಗ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗು ಉತ್ತರ ಪ್ರದೇಶ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಹಾಗೂ ಅಂತವರು ನೈಜ ಹಿಂದೂ ಆಗಿರಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಯೋಗಿ ಆದಿತ್ಯನಾಥ ಅವರ ಪ್ರತಿಕೃತಿ ದಹಿಸಿ ಸಿಟ್ಟು ಹೊರಹಾಕಿದ ಪ್ರತಿಭಟನಾಕಾರರು, ಯುವತಿಯ ಬೆನ್ನು ಮೂಳೆಯನ್ನು ಮುರಿದು, ನಾಲಗೆಯನ್ನು ಕತ್ತರಿಸಿ ಅತ್ಯಾಚಾರ ಮಾಡಿರುವುದು ಪೈಶಾಚಿಕ ಕೃತ್ಯವಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟ ಬಳಿಕ ಆಕೆಯ ಶವವನ್ನು ಅಜ್ಞಾತ ಸ್ಥಳದಲ್ಲಿ ಪೊಲೀಸರು ಸುಟ್ಟು ಹಾಕಿರುವುದು ಉತ್ತರ ಪ್ರದೇಶದ ನಿಜ ಚಿತ್ರಣ ದೇಶದ ಮುಂದೆ ಬಯಲಾಗಿದೆ ಎಂದು ಆರೋಪಿಸಿದ್ದಾರೆ.
ಅತ್ಯಾಚಾರಿ ಕೊಲೆಗಡುಕರಿಗೆ ಅತೀ ಶೀಘ್ರವಾಗಿ ಮರಣ ದಂಡನೆಯನ್ನು ವಿಧಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಈ ಕೂಡಲೇ ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಅವರು ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm