ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm