ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.
ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm