ಬ್ರೇಕಿಂಗ್ ನ್ಯೂಸ್
02-10-20 12:56 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 2: ಕೊರೊನ ಮತ್ತು ಡ್ರಗ್ಸ್ ಒಂದೇ ನಾಣ್ಯದ ಎರಡು ಮುಖಗಳಂತೆ. ಆದರೆ, ನಮ್ಮ ಮಕ್ಕಳ ಮುಂದೆ ಕೊರೊನಾ, ಡ್ರಗ್ಸ್ ಗಿಂತಲೂ ಮೊಬೈಲ್ ಫೋನ್ ತುಂಬಾ ಮಾರಕವಾಗಿ ಪರಿಣಮಿಸಿದೆ ಎಂದು ಕಾಪಿಕಾಡು ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ ಅಧ್ಯಕ್ಷ ಮಾಜಿ ರಾಷ್ಟ್ರೀಯ ಕಬಡ್ಡಿ ಪಟು ಗೋಪಿನಾಥ್ ಕಾಪಿಕಾಡು ಹೇಳಿದರು.
ಇಲ್ಲಿನ ತೊಕ್ಕೊಟ್ಟು ಕಾಪಿಕಾಡು ಬಳಿಯ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕೊರೊನಾ ಮತ್ತು ಡ್ರಗ್ಸ್ ಮುಕ್ತ ಭಾರತಕ್ಕಾಗಿ ಉಮಾಮಹೇಶ್ವರಿ ಕ್ಷೇತ್ರದಿಂದ ಉಳ್ಳಾಲ ಅಬ್ಬಕ್ಕ ವೃತ್ತದವರೆಗೆ ನಡೆದ ಕಾಲ್ನಡಿಗೆ ಜಾಗೃತಿ ಜಾಥಾವನ್ನುದ್ದೇಶಿಸಿ ಅವರು ಮಾತನಾಡಿದರು. ಜಗತ್ತನ್ನು ಇವತ್ತು ಕೊರೊನ ಆವರಿಸಿ ಜನರನ್ನು ಭಯಭೀತಿಗೊಳಿಸಿದೆ. ಡ್ರಗ್ಸ್ ಭೂತವು ನಮ್ಮ ಯುವ ಸಮುದಾಯವನ್ನು ಹಾಳುಗೆಡವುತ್ತಿದೆ. ನಮ್ಮ ಎಳೆಯ ಮಕ್ಕಳ ಕೈಯಲ್ಲಿ ಇವತ್ತು ಆನ್ ಲೈನ್ ನೆಪದಲ್ಲಿ ಮೊಬೈಲ್ ಪೋನನ್ನು ಕೊಡುತ್ತಿದ್ದು, ಮಕ್ಕಳಿಗೆ ಇದು ಕೊರೊನ, ಡ್ರಗ್ಸ್ ಗಿಂತಲೂ ಮಾರಕವಾಗಿದೆ. ಮಕ್ಕಳನ್ನು ಇಡೀ ದಿವಸ ಮೊಬೈಲಲ್ಲಿ ಇರಲು ಬಿಡದೆ, ವ್ಯಾಯಾಮ, ಯೋಗಗಳಲ್ಲಿ ತೊಡಗಿಸಿದಲ್ಲಿ ಸಧೃಡ ಭಾರತ ನಿರ್ಮಾಣವಾಗಲು ಸಾಧ್ಯ ಎಂದರು.
ಮಾಜಿ ಸಚಿವ ಯು.ಟಿ ಖಾದರ್ ಮಾತನಾಡಿ ಮಕ್ಕಳು ಶೈಕ್ಷಣಿಕ ಜೀವನದೊಟ್ಟಿಗೆ ಕ್ರೀಡೆ, ಯೋಗ, ವ್ಯಾಯಾಮಗಳಲ್ಲಿ ತೊಡಗಿಸಿದಲ್ಲಿ ಶರೀರದಲ್ಲಿ ರೋಗನಿರೋಧಕ ಶಕ್ತಿ ಇಮ್ಮಡಿಗೊಳ್ಳುವುದರ ಜೊತೆಗೆ ಡ್ರಗ್ಸ್ ನಂತಹ ದುಷ್ಚಟಗಳಿಂದಲೂ ದೂರ ಉಳಿಯಬಹುದೆಂದು ಹೇಳಿದರು. ಉಳ್ಳಾಲ ನಗರಸಭೆ ಕೌನ್ಸಿಲರ್ ಕು.ಭವಾನಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಉಮಾಮಹೇಶ್ವರಿ ಕಬಡ್ಡಿ ಅಸೋಸಿಯೇಶನ್ ಚೇರ್ಮನ್ ಎ.ಜೆ ಶೇಖರ್, ಗೌರವ ಸಲಹೆಗಾರರಾದ ಈಶ್ವರ ಉಳ್ಳಾಲ್, ಪ್ರ. ಕಾರ್ಯದರ್ಶಿ ಸುನೀಲ್ ರೈ , ಪದಾಧಿಕಾರಿಗಳಾದ ದಿನೇಶ್ ರೈ ಕಳ್ಳಿಗೆ, ಪ್ರಕಾಶ್, ಹರೀಶ್ ಗಾಂಧಿನಗರ, ದಿನಕರ್ ಬಗಂಬಿಲ, ರಘುರಾಮ್ ಶೆಟ್ಟಿ, ಗಣೇಶ್ ಕಾಪಿಕಾಡು, ಅರುಣ್ ಗಾಂಧಿನಗರ ಮೊದಲಾದವರು ಉಪಸ್ಥಿತರಿದ್ದರು.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm