ಬ್ರೇಕಿಂಗ್ ನ್ಯೂಸ್
02-10-20 12:56 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 2: ಕೊರೊನ ಮತ್ತು ಡ್ರಗ್ಸ್ ಒಂದೇ ನಾಣ್ಯದ ಎರಡು ಮುಖಗಳಂತೆ. ಆದರೆ, ನಮ್ಮ ಮಕ್ಕಳ ಮುಂದೆ ಕೊರೊನಾ, ಡ್ರಗ್ಸ್ ಗಿಂತಲೂ ಮೊಬೈಲ್ ಫೋನ್ ತುಂಬಾ ಮಾರಕವಾಗಿ ಪರಿಣಮಿಸಿದೆ ಎಂದು ಕಾಪಿಕಾಡು ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ ಅಧ್ಯಕ್ಷ ಮಾಜಿ ರಾಷ್ಟ್ರೀಯ ಕಬಡ್ಡಿ ಪಟು ಗೋಪಿನಾಥ್ ಕಾಪಿಕಾಡು ಹೇಳಿದರು.
ಇಲ್ಲಿನ ತೊಕ್ಕೊಟ್ಟು ಕಾಪಿಕಾಡು ಬಳಿಯ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕೊರೊನಾ ಮತ್ತು ಡ್ರಗ್ಸ್ ಮುಕ್ತ ಭಾರತಕ್ಕಾಗಿ ಉಮಾಮಹೇಶ್ವರಿ ಕ್ಷೇತ್ರದಿಂದ ಉಳ್ಳಾಲ ಅಬ್ಬಕ್ಕ ವೃತ್ತದವರೆಗೆ ನಡೆದ ಕಾಲ್ನಡಿಗೆ ಜಾಗೃತಿ ಜಾಥಾವನ್ನುದ್ದೇಶಿಸಿ ಅವರು ಮಾತನಾಡಿದರು. ಜಗತ್ತನ್ನು ಇವತ್ತು ಕೊರೊನ ಆವರಿಸಿ ಜನರನ್ನು ಭಯಭೀತಿಗೊಳಿಸಿದೆ. ಡ್ರಗ್ಸ್ ಭೂತವು ನಮ್ಮ ಯುವ ಸಮುದಾಯವನ್ನು ಹಾಳುಗೆಡವುತ್ತಿದೆ. ನಮ್ಮ ಎಳೆಯ ಮಕ್ಕಳ ಕೈಯಲ್ಲಿ ಇವತ್ತು ಆನ್ ಲೈನ್ ನೆಪದಲ್ಲಿ ಮೊಬೈಲ್ ಪೋನನ್ನು ಕೊಡುತ್ತಿದ್ದು, ಮಕ್ಕಳಿಗೆ ಇದು ಕೊರೊನ, ಡ್ರಗ್ಸ್ ಗಿಂತಲೂ ಮಾರಕವಾಗಿದೆ. ಮಕ್ಕಳನ್ನು ಇಡೀ ದಿವಸ ಮೊಬೈಲಲ್ಲಿ ಇರಲು ಬಿಡದೆ, ವ್ಯಾಯಾಮ, ಯೋಗಗಳಲ್ಲಿ ತೊಡಗಿಸಿದಲ್ಲಿ ಸಧೃಡ ಭಾರತ ನಿರ್ಮಾಣವಾಗಲು ಸಾಧ್ಯ ಎಂದರು.

ಮಾಜಿ ಸಚಿವ ಯು.ಟಿ ಖಾದರ್ ಮಾತನಾಡಿ ಮಕ್ಕಳು ಶೈಕ್ಷಣಿಕ ಜೀವನದೊಟ್ಟಿಗೆ ಕ್ರೀಡೆ, ಯೋಗ, ವ್ಯಾಯಾಮಗಳಲ್ಲಿ ತೊಡಗಿಸಿದಲ್ಲಿ ಶರೀರದಲ್ಲಿ ರೋಗನಿರೋಧಕ ಶಕ್ತಿ ಇಮ್ಮಡಿಗೊಳ್ಳುವುದರ ಜೊತೆಗೆ ಡ್ರಗ್ಸ್ ನಂತಹ ದುಷ್ಚಟಗಳಿಂದಲೂ ದೂರ ಉಳಿಯಬಹುದೆಂದು ಹೇಳಿದರು. ಉಳ್ಳಾಲ ನಗರಸಭೆ ಕೌನ್ಸಿಲರ್ ಕು.ಭವಾನಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಉಮಾಮಹೇಶ್ವರಿ ಕಬಡ್ಡಿ ಅಸೋಸಿಯೇಶನ್ ಚೇರ್ಮನ್ ಎ.ಜೆ ಶೇಖರ್, ಗೌರವ ಸಲಹೆಗಾರರಾದ ಈಶ್ವರ ಉಳ್ಳಾಲ್, ಪ್ರ. ಕಾರ್ಯದರ್ಶಿ ಸುನೀಲ್ ರೈ , ಪದಾಧಿಕಾರಿಗಳಾದ ದಿನೇಶ್ ರೈ ಕಳ್ಳಿಗೆ, ಪ್ರಕಾಶ್, ಹರೀಶ್ ಗಾಂಧಿನಗರ, ದಿನಕರ್ ಬಗಂಬಿಲ, ರಘುರಾಮ್ ಶೆಟ್ಟಿ, ಗಣೇಶ್ ಕಾಪಿಕಾಡು, ಅರುಣ್ ಗಾಂಧಿನಗರ ಮೊದಲಾದವರು ಉಪಸ್ಥಿತರಿದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am