ಬ್ರೇಕಿಂಗ್ ನ್ಯೂಸ್
02-10-20 12:56 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 2: ಕೊರೊನ ಮತ್ತು ಡ್ರಗ್ಸ್ ಒಂದೇ ನಾಣ್ಯದ ಎರಡು ಮುಖಗಳಂತೆ. ಆದರೆ, ನಮ್ಮ ಮಕ್ಕಳ ಮುಂದೆ ಕೊರೊನಾ, ಡ್ರಗ್ಸ್ ಗಿಂತಲೂ ಮೊಬೈಲ್ ಫೋನ್ ತುಂಬಾ ಮಾರಕವಾಗಿ ಪರಿಣಮಿಸಿದೆ ಎಂದು ಕಾಪಿಕಾಡು ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ ಅಧ್ಯಕ್ಷ ಮಾಜಿ ರಾಷ್ಟ್ರೀಯ ಕಬಡ್ಡಿ ಪಟು ಗೋಪಿನಾಥ್ ಕಾಪಿಕಾಡು ಹೇಳಿದರು.
ಇಲ್ಲಿನ ತೊಕ್ಕೊಟ್ಟು ಕಾಪಿಕಾಡು ಬಳಿಯ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕೊರೊನಾ ಮತ್ತು ಡ್ರಗ್ಸ್ ಮುಕ್ತ ಭಾರತಕ್ಕಾಗಿ ಉಮಾಮಹೇಶ್ವರಿ ಕ್ಷೇತ್ರದಿಂದ ಉಳ್ಳಾಲ ಅಬ್ಬಕ್ಕ ವೃತ್ತದವರೆಗೆ ನಡೆದ ಕಾಲ್ನಡಿಗೆ ಜಾಗೃತಿ ಜಾಥಾವನ್ನುದ್ದೇಶಿಸಿ ಅವರು ಮಾತನಾಡಿದರು. ಜಗತ್ತನ್ನು ಇವತ್ತು ಕೊರೊನ ಆವರಿಸಿ ಜನರನ್ನು ಭಯಭೀತಿಗೊಳಿಸಿದೆ. ಡ್ರಗ್ಸ್ ಭೂತವು ನಮ್ಮ ಯುವ ಸಮುದಾಯವನ್ನು ಹಾಳುಗೆಡವುತ್ತಿದೆ. ನಮ್ಮ ಎಳೆಯ ಮಕ್ಕಳ ಕೈಯಲ್ಲಿ ಇವತ್ತು ಆನ್ ಲೈನ್ ನೆಪದಲ್ಲಿ ಮೊಬೈಲ್ ಪೋನನ್ನು ಕೊಡುತ್ತಿದ್ದು, ಮಕ್ಕಳಿಗೆ ಇದು ಕೊರೊನ, ಡ್ರಗ್ಸ್ ಗಿಂತಲೂ ಮಾರಕವಾಗಿದೆ. ಮಕ್ಕಳನ್ನು ಇಡೀ ದಿವಸ ಮೊಬೈಲಲ್ಲಿ ಇರಲು ಬಿಡದೆ, ವ್ಯಾಯಾಮ, ಯೋಗಗಳಲ್ಲಿ ತೊಡಗಿಸಿದಲ್ಲಿ ಸಧೃಡ ಭಾರತ ನಿರ್ಮಾಣವಾಗಲು ಸಾಧ್ಯ ಎಂದರು.

ಮಾಜಿ ಸಚಿವ ಯು.ಟಿ ಖಾದರ್ ಮಾತನಾಡಿ ಮಕ್ಕಳು ಶೈಕ್ಷಣಿಕ ಜೀವನದೊಟ್ಟಿಗೆ ಕ್ರೀಡೆ, ಯೋಗ, ವ್ಯಾಯಾಮಗಳಲ್ಲಿ ತೊಡಗಿಸಿದಲ್ಲಿ ಶರೀರದಲ್ಲಿ ರೋಗನಿರೋಧಕ ಶಕ್ತಿ ಇಮ್ಮಡಿಗೊಳ್ಳುವುದರ ಜೊತೆಗೆ ಡ್ರಗ್ಸ್ ನಂತಹ ದುಷ್ಚಟಗಳಿಂದಲೂ ದೂರ ಉಳಿಯಬಹುದೆಂದು ಹೇಳಿದರು. ಉಳ್ಳಾಲ ನಗರಸಭೆ ಕೌನ್ಸಿಲರ್ ಕು.ಭವಾನಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಉಮಾಮಹೇಶ್ವರಿ ಕಬಡ್ಡಿ ಅಸೋಸಿಯೇಶನ್ ಚೇರ್ಮನ್ ಎ.ಜೆ ಶೇಖರ್, ಗೌರವ ಸಲಹೆಗಾರರಾದ ಈಶ್ವರ ಉಳ್ಳಾಲ್, ಪ್ರ. ಕಾರ್ಯದರ್ಶಿ ಸುನೀಲ್ ರೈ , ಪದಾಧಿಕಾರಿಗಳಾದ ದಿನೇಶ್ ರೈ ಕಳ್ಳಿಗೆ, ಪ್ರಕಾಶ್, ಹರೀಶ್ ಗಾಂಧಿನಗರ, ದಿನಕರ್ ಬಗಂಬಿಲ, ರಘುರಾಮ್ ಶೆಟ್ಟಿ, ಗಣೇಶ್ ಕಾಪಿಕಾಡು, ಅರುಣ್ ಗಾಂಧಿನಗರ ಮೊದಲಾದವರು ಉಪಸ್ಥಿತರಿದ್ದರು.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm