ಬ್ರೇಕಿಂಗ್ ನ್ಯೂಸ್
02-10-20 01:50 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 2: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ತಕ್ಷಣವೇ ಅಲ್ಲಿನ ಸರಕಾರವನ್ನು ವಜಾಗೊಳಿಸಬೇಕು, ಈ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ. ಉ. ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ರೈ ಈ ಆಗ್ರಹ ಮಾಡಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ಉತ್ತರ ಪ್ರದೇಶ ಸೇರಿದಂತೆ ದೇಶದಲ್ಲಿ ಹಲವೆಡೆ ದುರ್ಬಲರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಕಾನೂನು ವ್ಯವಸ್ಥೆ ಬರಗೆಟ್ಟು ಹೋಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದುರ್ಬಲ ವರ್ಗದವರ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚಿದ್ದು ದೇಶದ ದುರವಸ್ಥೆಯನ್ನು ತೋರಿಸುತ್ತಿದೆ. ಇವರ ಅಧಿಕಾರ ಅವಧಿಯಲ್ಲಿ ಪ್ರಬಲ ವರ್ಗದವರು ಅಪಾಯಕಾರಿಯಾಗುತ್ತಿದ್ದಾರೆ ಸಂಘ ಪರಿವಾರ ಅಧಿಕಾರದಲ್ಲಿರುವ ಕಡೆಯಲ್ಲಿ ಅಲ್ಲಿನ ಆಡಳಿತ ಪ್ರಬಲರ ರಕ್ಷಣೆಗೆ ಮುಂದಾಗುತ್ತಿದೆ. ಇದು ದುರಂತಕ್ಕೆ ಕಾರಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಜೊತೆಗೆ ಆರ್ಥಿಕತೆಯೂ ಸಂಪೂರ್ಣ ಕುಸಿದಿದೆ. ಉತ್ತರ ಪ್ರದೇಶದಲ್ಲಿ ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ಅಲ್ಲಿನ ಆಡಳಿತ ವ್ಯವಸ್ಥೆಯನ್ನು ತೋರಿಸುತ್ತದೆ. ಆದಿತ್ಯನಾಥ್ ಸರಕಾರ ಬಂದ ಮೇಲೆ ಉತ್ತರ ಪ್ರದೇಶದ ಸ್ಥಿತಿ ಅಧೋಗತಿಗೆ ಹೋಗಿದೆ ಎಂದು ರೈ ಹೇಳಿದರು.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತಿತರ ಮುಖಂಡರು ಇದ್ದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm