ಬ್ರೇಕಿಂಗ್ ನ್ಯೂಸ್
18-07-22 08:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 18 : ಮಂಗಳೂರು ಏರ್ಪೋರ್ಟ್ ಮೂಲಕ ಕೇರಳಕ್ಕೆ ತೆರಳಿದ್ದ ಯುವಕನಿಗೆ ಮಂಕಿ ಪಾಕ್ಸ್ ದೃಢಪಟ್ಟಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರಿನಲ್ಲಿ ಎಲರ್ಟ್ ಮಾಡಿದೆ.
ಜುಲೈ 13 ರಂದು ದುಬೈನಿಂದ ಮಂಗಳೂರು ಏರ್ಪೋರ್ಟ್ ಆಗಮಿಸಿದ್ದ 31 ವರ್ಷದ ಕಣ್ಣೂರು ಮೂಲದ ಯುವಕ ಶಂಕೆಯ ಮೇರೆಗೆ ಕಣ್ಣೂರಿನ ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ತಪಾಸಣೆಗೆ ಒಳಗಾಗಿದ್ದ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು, ಮಂಕಿ ಪಾಕ್ಸ್ ಇರುವುದನ್ನು ಪತ್ತೆ ಮಾಡಿದ್ದಾರೆ. ಯುವಕನ ಜೊತೆಗಿದ್ದ ವ್ಯಕ್ತಿಗೆ ದುಬೈನಲ್ಲಿ ರೋಗ ದೃಢಪಟ್ಟಿದ್ದರಿಂದ ಈತನೂ ಚಿಕಿತ್ಸೆಗೆ ದಾಖಲಾಗಿದ್ದ. ಈ ನಡುವೆ, ಯುವಕನ ರಕ್ತದ ಮಾದರಿಯನ್ನು ಪುಣೆ ವೈರಾಲಜಿ ಕೇಂದ್ರಕ್ಕೆ ವೈದ್ಯರು ಕಳುಹಿಸಿದ್ದು ಅಲ್ಲಿ ಪಾಸಿಟಿವ್ ಬಂದಿರುವುದು ಪತ್ತೆಯಾಗಿದೆ. ಇದರೊಂದಿಗೆ, ಕೇರಳದಲ್ಲಿ ಎರಡನೇ ಮಂಕಿ ಪಾಕ್ಸ್ ಪ್ರಕರಣ ಪತ್ತೆ ಆದಂತಾಗಿದೆ. ಮೊದಲ ಪ್ರಕರಣ ತಿರುವನಂತಪುರದಲ್ಲಿ ದಾಖಲಾಗಿತ್ತು.
ಇದೇ ವೇಳೆ, ಯುವಕನ ನೇರ ಸಂಪರ್ಕಕ್ಕೆ ಬಂದ 35 ಮಂದಿಗೆ ಐಸೊಲೇಶನ್ ಇರುವಂತೆ ಸೂಚಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು, ಆತನ ಜೊತೆಗೆ ಬಂದಿದ್ದ ಪ್ರಯಾಣಿಕರಿಗೆ ಪ್ರತ್ಯೇಕ ಇದ್ದು ನಿಗಾ ವಹಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಯುವಕ ದುಬೈನಿಂದ ಬಂದಿದ್ದ ವಿಮಾನದಲ್ಲಿ 191 ಪ್ರಯಾಣಿಕರಿದ್ದರು. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 15, ಉಡುಪಿ ಜಿಲ್ಲೆಯ 6, ಕಾಸರಗೋಡು ಜಿಲ್ಲೆಯ 13, ಕಣ್ಣೂರಿನ ಒಬ್ಬ ಸೇರಿದಂತೆ ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಅಧಿಕಾರಿಯೊಬ್ಬರನ್ನು ಐಸೊಲೇಶನ್ ಇರುವಂತೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಇದೇ ವೇಳೆ, ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮಂಕಿ ಪಾಕ್ಸ್ ಶಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕ ಐಸೊಲೇಶನ್ ವಾರ್ಡ್ ಆರಂಭಿಸಲಾಗಿದೆ. ಒಂದು ತಿಂಗಳ ಮೊದಲೇ ವಾರ್ಡ್ ಆರಂಭಿಸಲಾಗಿದೆ. ವಿದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ಇದಕ್ಕಾಗಿ ಏರ್ಪೋರ್ಟ್ ನಲ್ಲಿ ಕಟ್ಟುನಿಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.
Kerala on Monday confirmed the second case of monkeypox. The new case, a 31-year-old man, reached Kannur from Dubai on July 13. "The second positive case of Monkey Pox in Kerala has been confirmed in Kannur District," State Health Ministry confirmed. The government, on the other hand, has stepped up vigil to contain the spread of monkeypox, issuing special alerts to five districts, a day after the southern state reported the country's first case of the rare virus infection.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm