ಬ್ರೇಕಿಂಗ್ ನ್ಯೂಸ್
18-07-22 08:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 18 : ಮಂಗಳೂರು ಏರ್ಪೋರ್ಟ್ ಮೂಲಕ ಕೇರಳಕ್ಕೆ ತೆರಳಿದ್ದ ಯುವಕನಿಗೆ ಮಂಕಿ ಪಾಕ್ಸ್ ದೃಢಪಟ್ಟಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರಿನಲ್ಲಿ ಎಲರ್ಟ್ ಮಾಡಿದೆ.
ಜುಲೈ 13 ರಂದು ದುಬೈನಿಂದ ಮಂಗಳೂರು ಏರ್ಪೋರ್ಟ್ ಆಗಮಿಸಿದ್ದ 31 ವರ್ಷದ ಕಣ್ಣೂರು ಮೂಲದ ಯುವಕ ಶಂಕೆಯ ಮೇರೆಗೆ ಕಣ್ಣೂರಿನ ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ತಪಾಸಣೆಗೆ ಒಳಗಾಗಿದ್ದ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು, ಮಂಕಿ ಪಾಕ್ಸ್ ಇರುವುದನ್ನು ಪತ್ತೆ ಮಾಡಿದ್ದಾರೆ. ಯುವಕನ ಜೊತೆಗಿದ್ದ ವ್ಯಕ್ತಿಗೆ ದುಬೈನಲ್ಲಿ ರೋಗ ದೃಢಪಟ್ಟಿದ್ದರಿಂದ ಈತನೂ ಚಿಕಿತ್ಸೆಗೆ ದಾಖಲಾಗಿದ್ದ. ಈ ನಡುವೆ, ಯುವಕನ ರಕ್ತದ ಮಾದರಿಯನ್ನು ಪುಣೆ ವೈರಾಲಜಿ ಕೇಂದ್ರಕ್ಕೆ ವೈದ್ಯರು ಕಳುಹಿಸಿದ್ದು ಅಲ್ಲಿ ಪಾಸಿಟಿವ್ ಬಂದಿರುವುದು ಪತ್ತೆಯಾಗಿದೆ. ಇದರೊಂದಿಗೆ, ಕೇರಳದಲ್ಲಿ ಎರಡನೇ ಮಂಕಿ ಪಾಕ್ಸ್ ಪ್ರಕರಣ ಪತ್ತೆ ಆದಂತಾಗಿದೆ. ಮೊದಲ ಪ್ರಕರಣ ತಿರುವನಂತಪುರದಲ್ಲಿ ದಾಖಲಾಗಿತ್ತು.
ಇದೇ ವೇಳೆ, ಯುವಕನ ನೇರ ಸಂಪರ್ಕಕ್ಕೆ ಬಂದ 35 ಮಂದಿಗೆ ಐಸೊಲೇಶನ್ ಇರುವಂತೆ ಸೂಚಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು, ಆತನ ಜೊತೆಗೆ ಬಂದಿದ್ದ ಪ್ರಯಾಣಿಕರಿಗೆ ಪ್ರತ್ಯೇಕ ಇದ್ದು ನಿಗಾ ವಹಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಯುವಕ ದುಬೈನಿಂದ ಬಂದಿದ್ದ ವಿಮಾನದಲ್ಲಿ 191 ಪ್ರಯಾಣಿಕರಿದ್ದರು. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 15, ಉಡುಪಿ ಜಿಲ್ಲೆಯ 6, ಕಾಸರಗೋಡು ಜಿಲ್ಲೆಯ 13, ಕಣ್ಣೂರಿನ ಒಬ್ಬ ಸೇರಿದಂತೆ ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಅಧಿಕಾರಿಯೊಬ್ಬರನ್ನು ಐಸೊಲೇಶನ್ ಇರುವಂತೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಇದೇ ವೇಳೆ, ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮಂಕಿ ಪಾಕ್ಸ್ ಶಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕ ಐಸೊಲೇಶನ್ ವಾರ್ಡ್ ಆರಂಭಿಸಲಾಗಿದೆ. ಒಂದು ತಿಂಗಳ ಮೊದಲೇ ವಾರ್ಡ್ ಆರಂಭಿಸಲಾಗಿದೆ. ವಿದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ಇದಕ್ಕಾಗಿ ಏರ್ಪೋರ್ಟ್ ನಲ್ಲಿ ಕಟ್ಟುನಿಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.
Kerala on Monday confirmed the second case of monkeypox. The new case, a 31-year-old man, reached Kannur from Dubai on July 13. "The second positive case of Monkey Pox in Kerala has been confirmed in Kannur District," State Health Ministry confirmed. The government, on the other hand, has stepped up vigil to contain the spread of monkeypox, issuing special alerts to five districts, a day after the southern state reported the country's first case of the rare virus infection.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm