ಬ್ರೇಕಿಂಗ್ ನ್ಯೂಸ್
18-07-22 10:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 18 : ಬಹುಜನ ಚಳವಳಿ ನಾಯಕ, ಹಿರಿಯ ದಲಿತ ನಾಯಕರಾಗಿದ್ದ ಡೀಕಯ್ಯ ಮೃತಪಟ್ಟ ಹತ್ತು ದಿನಗಳ ಬಳಿಕ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ದಫನ ಮಾಡಿದ್ದ ಕಳೇಬರವನ್ನು ಹೊರತೆಗೆದು ಪೋಸ್ಟ್ ಮಾರ್ಟಂ ನಡೆಸಲಾಗಿದೆ.
ಜುಲೈ 8 ರಂದು ಮೃತಪಟ್ಟಿದ್ದ ಡೀಕಯ್ಯ ಅವರನ್ನು ಹುಟ್ಟೂರು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದಲ್ಲಿ ದಫನ ಮಾಡಲಾಗಿತ್ತು. ಮನೆಯಲ್ಲಿ ಒಬ್ಬರೇ ಇದ್ದಾಗ ಜುಲೈ 6 ರಂದು ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಆಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಜು.8ರಂದು ಮೆದುಳಿನ ರಕ್ತಸ್ರಾವದಿಂದ ಡೀಕಯ್ಯ ಮೃತಪಟ್ಟಿದ್ದಾಗಿ ಹೇಳಲಾಗಿತ್ತು.
ಡೀಕಯ್ಯ ಸಾವಿನ ಬಗ್ಗೆ ಅವರ ಅಕ್ಕನ ಗಂಡ ಪದ್ಮನಾಭ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬೆಳ್ತಂಗಡಿ ತಹಶೀಲ್ದಾರ್ ಸಮ್ಮುಖದಲ್ಲಿ ಮೃತದೇಹ ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಡೀಕಯ್ಯ ಐಸಿಯುನಲ್ಲೇ ಇದ್ದರು. ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವು ಆಗಿತ್ತು ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಮೃತದೇಹವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗಿತ್ತು.
ಆದರೆ ಇದೀಗ ಸಿಕ್ಕ ಆಸ್ಪತ್ರೆಯ ಮೆಡಿಕಲ್ ರಿಪೋರ್ಟ್ ನಲ್ಲಿ ದೇಹದ ಮೇಲೆ ಗಾಯದ ಗುರುತುಗಳಿದ್ದು, ಮೂಳೆ ಮುರಿತದ ಬಗ್ಗೆ ಉಲ್ಲೇಖಿಸಲಾಗಿದೆ. ಹೀಗಾಗಿ ಸಾವಿನ ಬಗ್ಗೆ ಸಂಶಯ ಉಂಟಾಗಿದೆ. ಯಾರೋ ಹೊಡೆದು ಕೊಲೆ ಮಾಡಿದ್ದಾರೋ ಎನ್ನುವ ಸಂಶಯ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೆಡಿಕಲ್ ರಿಪೋರ್ಟ್ ನಲ್ಲಿ ಮುರಿತದ ಬಗ್ಗೆ ಉಲ್ಲೇಖವಿದ್ದು ಮೃತದೇಹದ ಮರಣೋತ್ತರ ಪರೀಕ್ಷೆಗೆ ಮನವಿ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ.
Following suspicion expressed by members of Dalit leader P Deekaiah in Belthangady over the cause of his death, the body which was cremated at Padmunja was exhumed in the presence of the Tahsildar and sent for a post-mortem.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm