ಬ್ರೇಕಿಂಗ್ ನ್ಯೂಸ್
18-07-22 10:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 18 : ಬಹುಜನ ಚಳವಳಿ ನಾಯಕ, ಹಿರಿಯ ದಲಿತ ನಾಯಕರಾಗಿದ್ದ ಡೀಕಯ್ಯ ಮೃತಪಟ್ಟ ಹತ್ತು ದಿನಗಳ ಬಳಿಕ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ದಫನ ಮಾಡಿದ್ದ ಕಳೇಬರವನ್ನು ಹೊರತೆಗೆದು ಪೋಸ್ಟ್ ಮಾರ್ಟಂ ನಡೆಸಲಾಗಿದೆ.
ಜುಲೈ 8 ರಂದು ಮೃತಪಟ್ಟಿದ್ದ ಡೀಕಯ್ಯ ಅವರನ್ನು ಹುಟ್ಟೂರು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದಲ್ಲಿ ದಫನ ಮಾಡಲಾಗಿತ್ತು. ಮನೆಯಲ್ಲಿ ಒಬ್ಬರೇ ಇದ್ದಾಗ ಜುಲೈ 6 ರಂದು ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಆಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಜು.8ರಂದು ಮೆದುಳಿನ ರಕ್ತಸ್ರಾವದಿಂದ ಡೀಕಯ್ಯ ಮೃತಪಟ್ಟಿದ್ದಾಗಿ ಹೇಳಲಾಗಿತ್ತು.
ಡೀಕಯ್ಯ ಸಾವಿನ ಬಗ್ಗೆ ಅವರ ಅಕ್ಕನ ಗಂಡ ಪದ್ಮನಾಭ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬೆಳ್ತಂಗಡಿ ತಹಶೀಲ್ದಾರ್ ಸಮ್ಮುಖದಲ್ಲಿ ಮೃತದೇಹ ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಡೀಕಯ್ಯ ಐಸಿಯುನಲ್ಲೇ ಇದ್ದರು. ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವು ಆಗಿತ್ತು ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಮೃತದೇಹವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗಿತ್ತು.
ಆದರೆ ಇದೀಗ ಸಿಕ್ಕ ಆಸ್ಪತ್ರೆಯ ಮೆಡಿಕಲ್ ರಿಪೋರ್ಟ್ ನಲ್ಲಿ ದೇಹದ ಮೇಲೆ ಗಾಯದ ಗುರುತುಗಳಿದ್ದು, ಮೂಳೆ ಮುರಿತದ ಬಗ್ಗೆ ಉಲ್ಲೇಖಿಸಲಾಗಿದೆ. ಹೀಗಾಗಿ ಸಾವಿನ ಬಗ್ಗೆ ಸಂಶಯ ಉಂಟಾಗಿದೆ. ಯಾರೋ ಹೊಡೆದು ಕೊಲೆ ಮಾಡಿದ್ದಾರೋ ಎನ್ನುವ ಸಂಶಯ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೆಡಿಕಲ್ ರಿಪೋರ್ಟ್ ನಲ್ಲಿ ಮುರಿತದ ಬಗ್ಗೆ ಉಲ್ಲೇಖವಿದ್ದು ಮೃತದೇಹದ ಮರಣೋತ್ತರ ಪರೀಕ್ಷೆಗೆ ಮನವಿ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ.
Following suspicion expressed by members of Dalit leader P Deekaiah in Belthangady over the cause of his death, the body which was cremated at Padmunja was exhumed in the presence of the Tahsildar and sent for a post-mortem.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm