ಬ್ರೇಕಿಂಗ್ ನ್ಯೂಸ್
19-07-22 10:39 pm Mangalore Correspondent ಕರಾವಳಿ
ಉಳ್ಳಾಲ, ಜು.19 : ಕೆರೆ, ಕಾಲುವೆಗಳನ್ನೇ ಕಬ್ಜಾ ಮಾಡಿ ಬೆಂಗಳೂರಿನ ರಸ್ತೆಗಳಲ್ಲಿ ನದಿ ಹರಿಯುವಂತೆ ಮಾಡಿದ ಸಚಿವ ಆರ್.ಅಶೋಕ್ ಗೆ ಕಡಲ್ಕೊರೆತದ ಬಗ್ಗೆ ಏನ್ ಗೊತ್ತಿದೆ ಎಂದು ವಿದಾನ ಪರಿಷತ್ನ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.
ಅವರಿಂದು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ ಮತ್ತು ಉಳ್ಳಾಲ ಸೀ ಗ್ರೌಂಡ್ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅವಲೋಕನ ನಡೆಸಿದರು. ಕಳೆದ 60 ವರುಷಗಳಿಂದ ಕಡಲೂ ಇತ್ತು, ಕೊರೆತನೂ ಇತ್ತು, ಆವಾಗ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಏನು ಪರಿಹಾರ ನೀಡಿದ್ರು ಎಂದು ಹೇಳಿಕೆ ನೀಡಿದ್ದ ಸಚಿವ ಆರ್.ಅಶೋಕ್ ಪ್ರಶ್ನೆಗೆ ಟಾಂಗ್ ನೀಡಿ ಅವರು ಮಾತನಾಡಿದರು.

ಬೆಂಗಳೂರಿನ ಜಮೀನು, ಕೆರೆ, ಕಾಲುವೆಗಳನ್ನ ಕಬ್ಜಾ ಮಾಡಿದ ಅಶೋಕ್ ಅವರು ಕಾಂಗ್ರೇಸು, ಕಡಲ್ಕೊರೆತದ ಬಗ್ಗೆ ಮಾತನಾಡುವುದು ಬೇಡ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕಡಲ್ಕೊರೆತ ತಡೆಯಲು ಸಾಕಷ್ಟು ಕಾಮಗಾರಿ ನಡೆಸಿದೆ. ಈಗಿನ ಬಿಜೆಪಿ ಸರಕಾರಕ್ಕೆ ಅದನ್ನ ನಿರ್ವಹಣೆ ಮಾಡಲು ಪುರುಸೊತ್ತಿಲ್ಲ. ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಜನರನ್ನ ಅವರ ಪಾಡಿಗೆ ಬಿಟ್ಟರೆ ಸಮಸ್ಯೆ ಎದುರಾಗುವುದು ಸಹಜ. ಈ ಭಾಗಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರೂ ಸಹ ಕಡಲ್ಕೊರೆತ ಸಂತ್ರಸ್ತರಿಗೆ ಇನ್ನೂ ತುರ್ತು ಪರಿಹಾರ ಸಿಕ್ಕಿಲ್ಲ. ತುರ್ತು ಕಾಮಗಾರಿಯನ್ನೂ ನಡೆಸಿಲ್ಲ. ಮಳೆ, ಸಮುದ್ರ ಕೊರೆತದಿಂದ ಅಪಾರ ನಷ್ಟ ಉಂಟಾಗಿದ್ದು ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.

ಕಡಲ್ಕೊರೆತ ತಡೆಯ ಎಡಿಬಿ ಕಾಮಗಾರಿಯನ್ನು ಗಮನಿಸುವಾಗ ಭ್ರಷ್ಟಾಚಾರ ಕಂಡುಬರುತ್ತಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಎಡಿಬಿ ಕಾಮಗಾರಿಗೆ ಮೊದಲು ಆಳವಾಗಿ ಯೋಚಿಸಿ ತಾಂತ್ರಿಕ ಕಾಮಗಾರಿ ನಿರ್ವಹಿಸುತ್ತದೆ. ಆದರೆ ಇಲ್ಲಿ ಅದೆಲ್ಲವನ್ನೂ ಮೀರಿ ಕೆಲಸ ನಡೆದಿದ್ದು ಭ್ರಷ್ಟಾಚಾರ ಜೋರಾಗಿ ನಡೆದಿರುವುದು ಕಂಡುಬರುತ್ತದೆ. ಇವೆಲ್ಲದರ ಬಗ್ಗೆ ಸಮಗ್ರ ತನಿಖೆಯಾದಾಗ ಕಾಮಗಾರಿಯ ಹುಳುಕು ಹೊರಬರುತ್ತದೆ ಎಂದರು.
ಉಳ್ಳಾಲ ಭಾಗದಲ್ಲಿ ಅಕ್ರಮ ಮರಳು ಮಾಫಿಯಾ ಇದ್ದು ಸ್ವಚ್ಛ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕಿತ್ತು, ಆದರೆ 40 ಶೇ. ಕಮಿಷನ್ ನಲ್ಲಿರುವ ಸರ್ಕಾರ ಅಕ್ರಮ ಮರಳು ಮಾಫಿಯಾಕ್ಕೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದರು.


ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾದ ಯು.ಟಿ ಖಾದರ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಜೊತೆಗಿದ್ದರು.
What does R Ashok know about sea erosion slams B K Prasad at Ullal in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm