ಬ್ರೇಕಿಂಗ್ ನ್ಯೂಸ್
21-07-22 09:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 21 : ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋವು ಕಳ್ಳರ ಬಂಧನಕ್ಕೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದ್ದು ಅದರಂತೆ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಿರುವ ಶಾಸಕ ಕಾಮತ್, ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋವು ಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಪೊಲೀಸರನ್ನು ಕರೆದು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರದ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದು ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಂಕನಾಡಿ ಠಾಣಾಧಿಕಾರಿ ಸಿದ್ದಣ್ಣ ಗೌಡ ಭಜಂತ್ರಿ, ಹಿಂದೂ ಸಂಘಟನೆಯ ಮುಖಂಡರಾದ ಕಿರಣ್ ರೈ ಬಜಾಲ್, ಉಮೇಶ್ ಜಪ್ಪಿನಮೊಗರು, ಪ್ರದೀಪ್ ಪಂಪ್ವೆಲ್, ಪದ್ಮನಾಭ ನಾವೂರು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore Cow theft at Bajal, MLA Vedavyas kamath orders police to take strict action.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm