ಬ್ರೇಕಿಂಗ್ ನ್ಯೂಸ್
21-07-22 09:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 21 : ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋವು ಕಳ್ಳರ ಬಂಧನಕ್ಕೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದ್ದು ಅದರಂತೆ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಿರುವ ಶಾಸಕ ಕಾಮತ್, ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋವು ಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಪೊಲೀಸರನ್ನು ಕರೆದು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರದ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದು ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಂಕನಾಡಿ ಠಾಣಾಧಿಕಾರಿ ಸಿದ್ದಣ್ಣ ಗೌಡ ಭಜಂತ್ರಿ, ಹಿಂದೂ ಸಂಘಟನೆಯ ಮುಖಂಡರಾದ ಕಿರಣ್ ರೈ ಬಜಾಲ್, ಉಮೇಶ್ ಜಪ್ಪಿನಮೊಗರು, ಪ್ರದೀಪ್ ಪಂಪ್ವೆಲ್, ಪದ್ಮನಾಭ ನಾವೂರು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore Cow theft at Bajal, MLA Vedavyas kamath orders police to take strict action.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm