ಬ್ರೇಕಿಂಗ್ ನ್ಯೂಸ್
22-07-22 01:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಬಳಿಕ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ತೆರಳಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದರು. ಆದರೆ ಜಾಥಾ ಹೋಗಲು ಪೊಲೀಸರ ಪೂರ್ವಾನುಮತಿ ಪಡೆಯದ ಕಾರಣ ನಿರಾಕರಣೆ ಮಾಡಲಾಗಿತ್ತು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿದ್ದರಿಂದ ಬ್ಯಾರಿಕೇಡ್ ಹಾಕಿ, ಅಡ್ಡ ನಿಂತಿದ್ದರು. ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ಮೆರವಣಿಗೆ ಹೋಗಲು ಪೊಲೀಸರು ಅವಕಾಶ ನೀಡಲಿಲ್ಲ. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಬಿಜೆಪಿ ಸರಕಾರ ಪ್ರತಿಪಕ್ಷಗಳನ್ನು ಹತ್ತಿಕ್ಕಲು ಇಡಿ, ಸಿಬಿಐ, ಐಟಿಯಂತಹ ಏಜನ್ಸಿಗಳನ್ನು ಬಳಸಿಕೊಳ್ಳುತ್ತಿವೆ. ಈ ರೀತಿಯ ಸೇಡಿನ ರಾಜಕಾರಣಕ್ಕೆ ಜನರು ಹೆಚ್ಚು ಕಾಲ ಅವಕಾಶ ಕೊಡುವುದಿಲ್ಲ. ಸದ್ಯದಲ್ಲೇ ಕೊನೆ ಬೀಳಲಿದೆ ಎಂದರು.



























ಬಳಿಕ ಪೊಲೀಸರ ಜೊತೆ ತಳ್ಳಾಟ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಬಳಿಕ ಪೊಲೀಸರು ಒಬ್ಬೊಬ್ಬರನ್ನೇ ವಶಕ್ಕೆ ಪಡೆದು ಬಸ್ಸಿಗೆ ಹತ್ತಿಸಿದರು. ಕೆಲಹೊತ್ತು ಜಟಾಪಟಿ ನಡೆದಿದ್ದು ಪೊಲೀಸರು ಬಳಿಕ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಕವಿತಾ ಸನಿಲ್, ಮಿಥುನ್ ರೈ, ಐವನ್ ಡಿಸೋಜ, ಮೊಯ್ದೀನ್ ಬಾವ ಪೊಲೀಸ್ ಬ್ಯಾರಿಕೇಡ್ ತಳ್ಳಿಕೊಂಡು ಕೆಲಕಾಲ ಹೈಡ್ರಾಮಾ ನಡೆಸಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಧು ಬಂಗಾರಪ್ಪ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ED quizzes Sonia Gandhi for 2 hours in National Herald case congress members protest in Mangalore fight with police. Amid protests by party workers in the capital and other parts of the country, ED officials questioned Congress chief Sonia Gandhi for two hours on Thursday in connection with a money laundering case, better known as the National Herald case.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm