ಬ್ರೇಕಿಂಗ್ ನ್ಯೂಸ್
22-07-22 01:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಬಳಿಕ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ತೆರಳಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದರು. ಆದರೆ ಜಾಥಾ ಹೋಗಲು ಪೊಲೀಸರ ಪೂರ್ವಾನುಮತಿ ಪಡೆಯದ ಕಾರಣ ನಿರಾಕರಣೆ ಮಾಡಲಾಗಿತ್ತು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿದ್ದರಿಂದ ಬ್ಯಾರಿಕೇಡ್ ಹಾಕಿ, ಅಡ್ಡ ನಿಂತಿದ್ದರು. ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ಮೆರವಣಿಗೆ ಹೋಗಲು ಪೊಲೀಸರು ಅವಕಾಶ ನೀಡಲಿಲ್ಲ. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಬಿಜೆಪಿ ಸರಕಾರ ಪ್ರತಿಪಕ್ಷಗಳನ್ನು ಹತ್ತಿಕ್ಕಲು ಇಡಿ, ಸಿಬಿಐ, ಐಟಿಯಂತಹ ಏಜನ್ಸಿಗಳನ್ನು ಬಳಸಿಕೊಳ್ಳುತ್ತಿವೆ. ಈ ರೀತಿಯ ಸೇಡಿನ ರಾಜಕಾರಣಕ್ಕೆ ಜನರು ಹೆಚ್ಚು ಕಾಲ ಅವಕಾಶ ಕೊಡುವುದಿಲ್ಲ. ಸದ್ಯದಲ್ಲೇ ಕೊನೆ ಬೀಳಲಿದೆ ಎಂದರು.



























ಬಳಿಕ ಪೊಲೀಸರ ಜೊತೆ ತಳ್ಳಾಟ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಬಳಿಕ ಪೊಲೀಸರು ಒಬ್ಬೊಬ್ಬರನ್ನೇ ವಶಕ್ಕೆ ಪಡೆದು ಬಸ್ಸಿಗೆ ಹತ್ತಿಸಿದರು. ಕೆಲಹೊತ್ತು ಜಟಾಪಟಿ ನಡೆದಿದ್ದು ಪೊಲೀಸರು ಬಳಿಕ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಕವಿತಾ ಸನಿಲ್, ಮಿಥುನ್ ರೈ, ಐವನ್ ಡಿಸೋಜ, ಮೊಯ್ದೀನ್ ಬಾವ ಪೊಲೀಸ್ ಬ್ಯಾರಿಕೇಡ್ ತಳ್ಳಿಕೊಂಡು ಕೆಲಕಾಲ ಹೈಡ್ರಾಮಾ ನಡೆಸಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಧು ಬಂಗಾರಪ್ಪ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ED quizzes Sonia Gandhi for 2 hours in National Herald case congress members protest in Mangalore fight with police. Amid protests by party workers in the capital and other parts of the country, ED officials questioned Congress chief Sonia Gandhi for two hours on Thursday in connection with a money laundering case, better known as the National Herald case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm