ಬ್ರೇಕಿಂಗ್ ನ್ಯೂಸ್
22-07-22 05:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿಯ ಕೊಳಂಬೆ ಎಂಬಲ್ಲಿ ಸನ್ಯಾಸತ್ವ ಸ್ವೀಕರಿಸಿ ತನ್ನದೇ ಆದ ಮಠ ಕಟ್ಟಿಕೊಂಡಿದ್ದ ಶ್ರೀಕೃಷ್ಣ ದೇವಿಪ್ರಸಾದ ಸ್ವಾಮೀಜಿ (50) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಐದು ವರ್ಷಗಳ ಹಿಂದೆ ಪತ್ನಿ ಮಕ್ಕಳನ್ನು ತ್ಯಜಿಸಿ ಧರ್ಮಚಾವಡಿ ಹೆಸರಲ್ಲಿ ಮಠ ಕಟ್ಟಿಕೊಂಡಿದ್ದರು. ಮಠದಲ್ಲಿಯೇ ನೆಲೆಸಿದ್ದ ಅವರು ಬರುತ್ತಿದ್ದ ಆಸುಪಾಸಿನ ಭಕ್ತರಿಗೆ ಜೀವನದ ದಾರಿಗಳನ್ನು ಹೇಳುತ್ತಾ ಸ್ಥಳೀಯವಾಗಿ ಸ್ವಾಮೀಜಿ ಎಂದು ಕರೆಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ದೇವರಿಗೆ ಪೂಜೆ ಸಲ್ಲಿಸಿ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂರ್ವಾಶ್ರಮದಲ್ಲಿ ಇವರ ಹೆಸರು ದೇವಿಪ್ರಸಾದ್ ಶೆಟ್ಟಿ ಎಂಬುದಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿ ಇದ್ದರು. ಸನ್ಯಾಸತ್ವ ಪಡೆದ ಬಳಿಕ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದರು. ಕುಟುಂಬದ ಸಂಪರ್ಕವನ್ನೂ ಕಡಿದುಕೊಂಡಿದ್ದರು. ಕಳೆದ ವರ್ಷ ತನ್ನ ಧರ್ಮ ಚಾವಡಿಯಲ್ಲಿ ಲಕ್ಷಾಂತರ ಖರ್ಚು ಮಾಡಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿದ್ದರು. ಸ್ವಾಮೀಜಿ ದಿಢೀರ್ ಸಾವಿಗೆ ಶರಣಾಗಿದ್ದು ಅನುಮಾನ ಮೂಡಿಸಿದೆ. ಈ ಬಗ್ಗೆ ಪೂರ್ವಾಶ್ರಮದ ಪತ್ನಿ ಪ್ರಭಾ ಶೆಟ್ಟಿ ಬಜ್ಪೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅದರ ಬಳಿಯಲ್ಲೇ ಪ್ಲಾಸ್ಟಿಕ್ ಕುರ್ಚಿ ಕೂಡ ಇತ್ತು. ಮಠಕ್ಕೆ ಬಂದವರು ಸ್ವಾಮೀಜಿ ಸತ್ತಿರುವುದನ್ನು ನೋಡಿ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
The seer of Dharma Chavadi near Talakala Kandhavara panchayat limits Kolambe village killed himself on Friday, July 22 by hanging. The deceased has been identified as Sri Sri Sri Krishna Devi Prasad aged 51 years.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm