ಬ್ರೇಕಿಂಗ್ ನ್ಯೂಸ್
22-07-22 05:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿಯ ಕೊಳಂಬೆ ಎಂಬಲ್ಲಿ ಸನ್ಯಾಸತ್ವ ಸ್ವೀಕರಿಸಿ ತನ್ನದೇ ಆದ ಮಠ ಕಟ್ಟಿಕೊಂಡಿದ್ದ ಶ್ರೀಕೃಷ್ಣ ದೇವಿಪ್ರಸಾದ ಸ್ವಾಮೀಜಿ (50) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಐದು ವರ್ಷಗಳ ಹಿಂದೆ ಪತ್ನಿ ಮಕ್ಕಳನ್ನು ತ್ಯಜಿಸಿ ಧರ್ಮಚಾವಡಿ ಹೆಸರಲ್ಲಿ ಮಠ ಕಟ್ಟಿಕೊಂಡಿದ್ದರು. ಮಠದಲ್ಲಿಯೇ ನೆಲೆಸಿದ್ದ ಅವರು ಬರುತ್ತಿದ್ದ ಆಸುಪಾಸಿನ ಭಕ್ತರಿಗೆ ಜೀವನದ ದಾರಿಗಳನ್ನು ಹೇಳುತ್ತಾ ಸ್ಥಳೀಯವಾಗಿ ಸ್ವಾಮೀಜಿ ಎಂದು ಕರೆಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ದೇವರಿಗೆ ಪೂಜೆ ಸಲ್ಲಿಸಿ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂರ್ವಾಶ್ರಮದಲ್ಲಿ ಇವರ ಹೆಸರು ದೇವಿಪ್ರಸಾದ್ ಶೆಟ್ಟಿ ಎಂಬುದಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿ ಇದ್ದರು. ಸನ್ಯಾಸತ್ವ ಪಡೆದ ಬಳಿಕ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದರು. ಕುಟುಂಬದ ಸಂಪರ್ಕವನ್ನೂ ಕಡಿದುಕೊಂಡಿದ್ದರು. ಕಳೆದ ವರ್ಷ ತನ್ನ ಧರ್ಮ ಚಾವಡಿಯಲ್ಲಿ ಲಕ್ಷಾಂತರ ಖರ್ಚು ಮಾಡಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿದ್ದರು. ಸ್ವಾಮೀಜಿ ದಿಢೀರ್ ಸಾವಿಗೆ ಶರಣಾಗಿದ್ದು ಅನುಮಾನ ಮೂಡಿಸಿದೆ. ಈ ಬಗ್ಗೆ ಪೂರ್ವಾಶ್ರಮದ ಪತ್ನಿ ಪ್ರಭಾ ಶೆಟ್ಟಿ ಬಜ್ಪೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅದರ ಬಳಿಯಲ್ಲೇ ಪ್ಲಾಸ್ಟಿಕ್ ಕುರ್ಚಿ ಕೂಡ ಇತ್ತು. ಮಠಕ್ಕೆ ಬಂದವರು ಸ್ವಾಮೀಜಿ ಸತ್ತಿರುವುದನ್ನು ನೋಡಿ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
The seer of Dharma Chavadi near Talakala Kandhavara panchayat limits Kolambe village killed himself on Friday, July 22 by hanging. The deceased has been identified as Sri Sri Sri Krishna Devi Prasad aged 51 years.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm