ಬ್ರೇಕಿಂಗ್ ನ್ಯೂಸ್
22-07-22 05:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿಯ ಕೊಳಂಬೆ ಎಂಬಲ್ಲಿ ಸನ್ಯಾಸತ್ವ ಸ್ವೀಕರಿಸಿ ತನ್ನದೇ ಆದ ಮಠ ಕಟ್ಟಿಕೊಂಡಿದ್ದ ಶ್ರೀಕೃಷ್ಣ ದೇವಿಪ್ರಸಾದ ಸ್ವಾಮೀಜಿ (50) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಐದು ವರ್ಷಗಳ ಹಿಂದೆ ಪತ್ನಿ ಮಕ್ಕಳನ್ನು ತ್ಯಜಿಸಿ ಧರ್ಮಚಾವಡಿ ಹೆಸರಲ್ಲಿ ಮಠ ಕಟ್ಟಿಕೊಂಡಿದ್ದರು. ಮಠದಲ್ಲಿಯೇ ನೆಲೆಸಿದ್ದ ಅವರು ಬರುತ್ತಿದ್ದ ಆಸುಪಾಸಿನ ಭಕ್ತರಿಗೆ ಜೀವನದ ದಾರಿಗಳನ್ನು ಹೇಳುತ್ತಾ ಸ್ಥಳೀಯವಾಗಿ ಸ್ವಾಮೀಜಿ ಎಂದು ಕರೆಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ದೇವರಿಗೆ ಪೂಜೆ ಸಲ್ಲಿಸಿ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂರ್ವಾಶ್ರಮದಲ್ಲಿ ಇವರ ಹೆಸರು ದೇವಿಪ್ರಸಾದ್ ಶೆಟ್ಟಿ ಎಂಬುದಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿ ಇದ್ದರು. ಸನ್ಯಾಸತ್ವ ಪಡೆದ ಬಳಿಕ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದರು. ಕುಟುಂಬದ ಸಂಪರ್ಕವನ್ನೂ ಕಡಿದುಕೊಂಡಿದ್ದರು. ಕಳೆದ ವರ್ಷ ತನ್ನ ಧರ್ಮ ಚಾವಡಿಯಲ್ಲಿ ಲಕ್ಷಾಂತರ ಖರ್ಚು ಮಾಡಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿದ್ದರು. ಸ್ವಾಮೀಜಿ ದಿಢೀರ್ ಸಾವಿಗೆ ಶರಣಾಗಿದ್ದು ಅನುಮಾನ ಮೂಡಿಸಿದೆ. ಈ ಬಗ್ಗೆ ಪೂರ್ವಾಶ್ರಮದ ಪತ್ನಿ ಪ್ರಭಾ ಶೆಟ್ಟಿ ಬಜ್ಪೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅದರ ಬಳಿಯಲ್ಲೇ ಪ್ಲಾಸ್ಟಿಕ್ ಕುರ್ಚಿ ಕೂಡ ಇತ್ತು. ಮಠಕ್ಕೆ ಬಂದವರು ಸ್ವಾಮೀಜಿ ಸತ್ತಿರುವುದನ್ನು ನೋಡಿ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
The seer of Dharma Chavadi near Talakala Kandhavara panchayat limits Kolambe village killed himself on Friday, July 22 by hanging. The deceased has been identified as Sri Sri Sri Krishna Devi Prasad aged 51 years.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm