ಬ್ರೇಕಿಂಗ್ ನ್ಯೂಸ್
22-07-22 09:43 pm Mangalore Correspondent ಕರಾವಳಿ
ಉಳ್ಳಾಲ, ಜು.22 : ರೈಲ್ವೇ ಇಲಾಖೆಯ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವುಗೈದು ಪರಾರಿಯಾಗುತ್ತಿದ್ದ ಟೆಂಪೋ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ನಸುಕಿನಲ್ಲಿ 2.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸೋಮೇಶ್ವರ ಬಳಿ ರೈಲ್ವೇ ಕಾಮಗಾರಿಗಾಗಿ ಗೋದಾಮಿನಲ್ಲಿ ಇರಿಸಿದ್ದ ಲಕ್ಷಾಂತರ ಬೆಳೆಬಾಳುವ ವಿದ್ಯುತ್ ತಂತಿಗಳನ್ನು ಕಳವು ಮಾಡಿ, ಟೆಂಪೋದಲ್ಲಿ ಮಂಗಳೂರು ಕಡೆ ತೆರಳುತ್ತಿದ್ದಾಗ ಓವರ್ ಬ್ರಿಡ್ಜ್ ನಿಂದ ತೊಕ್ಕೊಟ್ಟು ಒಳಪೇಟೆ ಸಂಪರ್ಕದ ಇಳಿಜಾರು ರಸ್ತೆಯಲ್ಲಿ ಟೆಂಪೊ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಟೆಂಪೋದಲ್ಲಿದ್ದ ಆರೋಪಿಗಳನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದು ಉಳ್ಳಾಲ ಪೊಲೀಸರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.



ಇಬ್ಬರು ಮಹಿಳೆಯರ ಸಹಿತ ನಾಲ್ಕು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ತಮಿಳುನಾಡು ಮೂಲದ ಪ್ರಸಕ್ತ ಮಂಗಳೂರಿನ ಸೂಟರ್ ಪೇಟೆಯ ನಿವಾಸಿ ವೆಂಕಟೇಶ್, ಹೊಯ್ಗೆ ಬಜಾರಿನ ಜಯಲಕ್ಷ್ಮಿ, ನಂದಿನಿ ಹಾಗೂ ಮೂಲ್ಕಿಯ ರಾಜ್ ಕುಮಾರ್ ಪೊಲೀಸರ ವಶದಲ್ಲಿದ್ದಾರೆ. ಜಯಲಕ್ಷ್ಮಿ, ನಂದಿನಿ ಹಾಗೂ ವೆಂಕಟೇಶನ ಮೇಲೆ ಈ ಮೊದಲೇ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ್ದ ವಿದ್ಯುತ್ ತಂತಿಯ ಮೌಲ್ಯ 3.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಯಾಳು ಆರೋಪಿಗಳನ್ನ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A tempo met with an accident after robbery of Electronic wires from Ullal Railway Godown in Mangalore. The accused have been hospitalized.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm