ಬ್ರೇಕಿಂಗ್ ನ್ಯೂಸ್
23-07-22 11:47 am Mangalore Correspondent ಕರಾವಳಿ
ಉಳ್ಳಾಲ, ಜು.23 : ಕಡಲ್ಕೊರೆತ ತುರ್ತು ತಡೆ ಕಾಮಗಾರಿಗೆ NDRF ಸ್ಕೀಮ್ ನಿಂದ ಹಣ ಬಿಡುಗಡೆ ಮಾಡಲು ಅವಕಾಶವಿದ್ದರೂ NDRF ನಿಧಿಯನ್ನ ಖರ್ಚು ಮಾಡದೆ ಸುಮ್ಮನೆ ಕುಳಿತಿದ್ದಾರೆ. ಇವರಿಗೆ ತುರ್ತು ಕಾಮಗಾರಿ ಎತ್ತಿಕೊಳ್ಳಲು ಯಾರು ಅಡ್ಡಿಯಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ,ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರಶ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಅವರು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನ ಆಲಿಸಿದರು. ಕಡಲ್ಕೊರೆತ ಸಮಸ್ಯೆ ಹೊಸದೇನು ಅಲ್ಲ. ನಮ್ಮ ಸರಕಾರ ಆಡಳಿತದಲ್ಲಿದ್ದಾಗ ಅಳಿವೆಬಾಗಿಲು ಸೇರಿದಂತೆ ಅನೇಕ ಕಡಲ್ಕೊರೆತ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿ ನಡೆಸಿದ್ದೇವೆ. ಯಾವುದೇ ಶಾಶ್ವತ ಕಾಮಗಾರಿ ನಡೆಸಿದರೂ ಪ್ರತಿ ವರುಷವೂ ನಿರ್ವಹಣಾ ಕಾಮಗಾರಿ ಅಗತ್ಯ.
ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರವು ಅಸಡ್ಡೆ ತೋರಿ ಕಳೆದ ಮೂರು ವರ್ಷಗಳಿಂದಲೂ ಕಡಲ್ಕೊರೆತ ಪೀಡಿತ ಉಚ್ಚಿಲ, ಬಟ್ಟಪ್ಪಾಡಿ ಪ್ರದೇಶಗಳನ್ನ ಕಡೆಗಣಿಸುತ್ತಾ ಬಂದಿದೆ. ಬಜೆಟಲ್ಲಿ ಕನಿಷ್ಠ ನಿರ್ವಹಣೆಗೂ ಹಣ ಕೊಡದಿದ್ದರೆ ಕಡಲು ಪ್ರಕ್ಷುಬ್ಧಗೊಂಡು ತೀರ ಪ್ರದೇಶವನ್ನ ನುಂಗುವುದು ಖಂಡಿತ. ಈಗಾಗಲೇ ಸ್ಥಳೀಯ ಬೋವಿ ಜನಾಂಗದವರು ಪ್ರದೇಶದಲ್ಲಿ ತಮ್ಮ ಅಸ್ತಿತ್ವವನ್ನೇ ಕಳಕೊಳ್ಳುವ ಭೀತಿಯಲ್ಲಿದ್ದಾರೆಂದರು.
ತಾನು ಮತ್ತು ಶಾಸಕ ಖಾದರ್ ಅವರು ತಕ್ಷಣವೇ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಕಡಲ್ಕೊರೆತ ತಡೆಗೆ ತುರ್ತು, ಮಾಧ್ಯಮಿಕ ಮತ್ತು ಶಾಶ್ವತ ಕಾಮಗಾರಿ ನಡೆಸುವ ಬಗ್ಗೆ ಮಾತುಕತೆ ನಡೆಸಲಿದ್ದೇವೆ ಎಂದರು. ಸ್ಥಳೀಯ ಶಾಸಕ ಯು.ಟಿ ಖಾದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಜೊತೆಯಲ್ಲಿದ್ದರು.
Why is state government neglecting Sea erosion so much, what's making them neglect such things slammed former congress minister Veerappa Moily visiting sea erosion effected areas at Ullal in Mangalore.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm