ಬ್ರೇಕಿಂಗ್ ನ್ಯೂಸ್
23-07-22 09:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಸಿಟಿ ಜಂಕ್ಷನ್ ನಡುವೆ ಮೈಸೂರು ಮಾರ್ಗದಲ್ಲಿ ಜುಲೈ 26ರಿಂದ ಆಗಸ್ಟ್ 31ರ ತನಕ ವಾರದಲ್ಲಿ ಮೂರು ದಿನ ವಿಶೇಷ ರಾತ್ರಿ ರೈಲು ಸೇವೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ನಿರಂತರ ಮಳೆ ಮತ್ತು ಭೂಕುಸಿತ ಪರಿಣಾಮ ರಸ್ತೆ ಸಂಪರ್ಕ ಮಾರ್ಗ ಸಮಸ್ಯೆ ಆಗಿರುವುದರಿಂದ ಮಂಗಳೂರು- ಬೆಂಗಳೂರು ನಡುವೆ ದಿನಂಪ್ರತಿ ಹೆಚ್ಚುವರಿ ರೈಲು ಒದಗಿಸುವಂತೆ ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಮಾಡಿದ ಮನವಿಗೆ ರೈಲ್ವೇ ಮಂಡಳಿ ಈ ಮೂಲಕ ಸ್ಪಂದಿಸಿದೆ.
ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಡಲಿರುವ ಹೊಸ ರೈಲು ವಿವಿಧ ನಿಲ್ದಾಣಗಳಿಗೆ ತಲುಪುವ ಸಮಯ ಹೀಗಿದೆ. ಕೆಂಗೇರಿ- ರಾತ್ರಿ 8.49, ರಾಮನಗರ- ರಾತ್ರಿ 9.13, ಚನ್ನರಾಯಪಟ್ಟಣ- ರಾತ್ರಿ 9.24,ಮಂಡ್ಯ- ರಾತ್ರಿ 9.54, ಮೈಸೂರು ಜಂಕ್ಷನ್- ರಾತ್ರಿ 11, ಕೃಷ್ಣರಾಜನಗರ- ರಾತ್ರಿ 11.49, ಹೊಳೆನರಸಿಪುರ- ರಾತ್ರಿ 12.43,
ಹಾಸನ- ರಾತ್ರಿ 1.35, ಸಕಲೇಶಪುರ- ಬೆಳಗಿನ ಜಾವ 3 ಗಂಟೆ, ಸುಬ್ರಹ್ಮಣ್ಯ ರೋಡ್- ಬೆಳಗ್ಗೆ 6.10, ಕಬಕ ಪುತ್ತೂರು- ಬೆಳಗ್ಗೆ 7,
ಬಂಟ್ವಾಳ- ಬೆಳಗ್ಗೆ 7.30, ಪಡೀಲ್- ಬೆಳಗ್ಗೆ 8.25, ಮಂಗಳೂರು ಸೆಂಟ್ರಲ್- ಬೆಳಗ್ಗೆ 09.05
ಮಂಗಳೂರಿನಿಂದ ಸಂಜೆ 6.35ಕ್ಕೆ ಹೊರಡುವ ರೈಲು ವಿವಿಧ ನಿಲ್ದಾಣಗಳಿಗೆ ತಲುಪುವ ಸಮಯ ಹೀಗಿದೆ. ಮಂಗಳೂರು ಜಂಕ್ಷನ್- ಸಂಜೆ 6.48, ಪಡೀಲ್- ಸಂಜೆ 7.10, ಬಂಟ್ವಾಳ- ಸಂಜೆ 7.20, ಕಬಕ ಪುತ್ತೂರು- ಸಂಜೆ 7.48, ಸುಬ್ರಹ್ಮಣ್ಯ ರೋಡ್- ರಾತ್ರಿ 8.40,ಸಕಲೇಶಪುರ- ರಾತ್ರಿ 9.20, ಹಾಸನ- ಮಧ್ಯರಾತ್ರಿ 12.25, ಹೊಳೆನರಸಿಪುರ- ಮಧ್ಯರಾತ್ರಿ 1.13, ಕೃಷ್ಣರಾಜನಗರ- ರಾತ್ರಿ 2.08, ಮೈಸೂರು ಜಂಕ್ಷನ್- ಬೆಳಗಿನ ಜಾವ 3, ಮಂಡ್ಯ- ಬೆಳಗಿನ ಜಾವ 3.54, ಚನ್ನರಾಯಪಟ್ಟಣ- ಬೆಳಗಿನಜಾವ 4.30, ರಾಮನಗರ- ಬೆಳಗಿನಜಾವ 4.42, ಕೆಂಗೇರಿ- ಬೆಳಗಿನಜಾವ 5.11, ಬೆಂಗಳೂರು ಸಿಟಿ ಜಂಕ್ಷನ್ - ಬೆಳಗ್ಗೆ 6.15
ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಹತ್ತಿರದ ಶಿರಾಡಿ ಘಾಟ್ ಮಾರ್ಗ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ದಿನಂಪ್ರತಿ ಉಭಯ ನಗರಗಳ ನಡುವೆ ತಲಾ ಒಂದು ಹಗಲು ರೈಲು ಮತ್ತು ರಾತ್ರಿ ರೈಲು ಇದೆ. ಈ ಮಾರ್ಗದಲ್ಲಿ ಹೆಚ್ಚುವರಿ ರೈಲಿನ ಅವಶ್ಯಕತೆ ತುಂಬಾ ಇದೆ ಎಂದು ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
ಯಾವ ದಿನ ಸಂಚಾರ ?
ಮಂಗಳೂರಿನಿಂದ ಬೆಂಗಳೂರು ನಗರಕ್ಕೆ ಜುಲೈ 27ರಿಂದ ಆ.31ರ ತನಕ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ನಂಬರಿನ ರೈಲು ಸಂಚರಿಸಲಿದೆ. ಬೆಂಗಳೂರಿನಿಂದ ಮಂಗಳೂರಿಗೆ ಜುಲೈ 26ರಿಂದ ಆಗಸ್ಟ್ 30ರ ತನಕ ಪ್ರತಿ ಭಾನುವಾರ, ಮಂಗಳವಾರ ಮತ್ತು ಗುರುವಾರ 06547 ನಂಬರಿನ ರೈಲು ಸಂಚರಿಸಲಿದೆ.
The South Western Railway (SWR) has decided to operate a tri-weekly special express between Bengaluru and Mangaluru via Mysuru from July 26 in view of the snapped road connectivity via National Highway 75 (Shiradi Ghat) and NH 276 (Sampaje Ghat) between the two cities.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm