ಬ್ರೇಕಿಂಗ್ ನ್ಯೂಸ್
24-07-22 07:12 pm Mangalore Correspondent ಕರಾವಳಿ
ಉಳ್ಳಾಲ, ಜು.24 : ವಿದ್ಯುತ್ ಶಾಕ್ ಹೊಡೆದು ಅಕಾಲಿಕ ಸಾವನ್ನಪ್ಪಿದ್ದ ತೊಕ್ಕೊಟ್ಟು ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯ ಉದ್ಯೋಗಿ ಇಲ್ಯಾಸ್ ಮಹಮ್ಮದ್ ಹರೇಕಳ ಸ್ಮರಣಾರ್ಥ ತಿಂಗಳೊಂದರಲ್ಲೇ ಬೃಹತ್ ರಕ್ತದಾನ ಶಿಬಿರ ತೊಕ್ಕೊಟ್ಟಿನಲ್ಲಿ ನಡೆದಿದ್ದು, ಅಗಲಿದ ಸಿಬ್ಬಂದಿಯ ಮೇಲೆ ಮಾಲಕರು ತೋರಿದ ಪ್ರೀತಿ, ಗೌರವಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯಲ್ಲಿ ಕಳೆದ 15 ವರುಷದಿಂದ ಉದ್ಯೋಗಿಯಾಗಿದ್ದ ಇಲ್ಯಾಸ್ ಮಹಮ್ಮದ್ ಅವರು ಕಳೆದ ತಿಂಗಳ 24 ರಂದು ಸಂಜೆ ಮಾವಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಹೈಟೆನ್ಷನ್ ತಂತಿ ತಗುಲಿ ಮರದಲ್ಲೇ ದಾರಣ ಸಾವನ್ನಪ್ಪಿದ್ದರು. ಅಗಲಿದ ಪ್ರೀತಿಯ ಉದ್ಯೋಗಿಯ ಸ್ಮರಣಾರ್ಥವಾಗಿ ಸಾಗರ್ ಕಲೆಕ್ಷನ್ ತೊಕ್ಕೊಟ್ಟು, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮತ್ತು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯ ರಕ್ತನಿಧಿ ಸಂಸ್ಥೆಯವರು ಜೊತೆ ಸೇರಿ ಇಂದು ತೊಕ್ಕೊಟ್ಟಿನಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು. ಶಿಬಿರದಲ್ಲಿ ಅನೇಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ರಕ್ತದಾನ ಮಾಡುವಂತೆ ಪ್ರೇರೇಪಿಸಲು ರಕ್ತದಾನಿಗಳಿಗೆ ಆಕರ್ಷಕ ಉಡುಗೊರೆಯನ್ನೂ ನೀಡಲಾಯಿತು.


ಸಾಗರ್ ಕಲೆಕ್ಷನ್ಸ್ ಪಾಲುದಾರ ಅಬ್ದುಲ್ ರಹಿಮಾನ್ ಮಾತನಾಡಿ ಇಲ್ಯಾಸ್ ಅವರು ಸ್ನೇಹಜೀವಿಯಲ್ಲದೆ, ಪರೋಪಕಾರಿಯಾಗಿದ್ದರು. ಅವರ ಹೆಸರಲ್ಲೇ ಜಾತಿ, ಧರ್ಮ ಮೀರಿ ಸಮಾಜಕ್ಕೆ ಅತ್ಯಗತ್ಯ ಇರುವ ರಕ್ತವನ್ನ ಕ್ರೋಢೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಹೇಳಿದರು.


ಸ್ಥಳೀಯ ಶಾಸಕ ಯು.ಟಿ ಖಾದರ್, ಉಳ್ಳಾಲ ದರ್ಗಾ ಅಧ್ಯಕ್ಷ ರಶೀದ್ ಹಾಜಿ, ಮಂಗಳೂರು ನಗರ ಡಿಸಿಪಿ ದಿನೇಶ್ ಕುಮಾರ್, ಬಿಜೆಪಿ ಮುಖಂಡ ಚಂದ್ರಹಾಸ್ ಉಳ್ಳಾಲ್, ಸಾಗರ್ ಕಲೆಕ್ಷನ್ ಪಾಲುದಾರ ಇಸ್ಮಾಯಿಲ್, ಸಮಾಜ ಸೇವಕರಾದ ಝಾಕಿರ್ ಇಕ್ಲಾಸ್ ಮೊದಲಾವರು ಉಪಸ್ಥಿತರಿದ್ದರು.
Ullal Youth dies of electrocution, family conduct mass blood camp on the day of his death anniversary.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm