ಬ್ರೇಕಿಂಗ್ ನ್ಯೂಸ್
24-07-22 07:12 pm Mangalore Correspondent ಕರಾವಳಿ
ಉಳ್ಳಾಲ, ಜು.24 : ವಿದ್ಯುತ್ ಶಾಕ್ ಹೊಡೆದು ಅಕಾಲಿಕ ಸಾವನ್ನಪ್ಪಿದ್ದ ತೊಕ್ಕೊಟ್ಟು ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯ ಉದ್ಯೋಗಿ ಇಲ್ಯಾಸ್ ಮಹಮ್ಮದ್ ಹರೇಕಳ ಸ್ಮರಣಾರ್ಥ ತಿಂಗಳೊಂದರಲ್ಲೇ ಬೃಹತ್ ರಕ್ತದಾನ ಶಿಬಿರ ತೊಕ್ಕೊಟ್ಟಿನಲ್ಲಿ ನಡೆದಿದ್ದು, ಅಗಲಿದ ಸಿಬ್ಬಂದಿಯ ಮೇಲೆ ಮಾಲಕರು ತೋರಿದ ಪ್ರೀತಿ, ಗೌರವಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯಲ್ಲಿ ಕಳೆದ 15 ವರುಷದಿಂದ ಉದ್ಯೋಗಿಯಾಗಿದ್ದ ಇಲ್ಯಾಸ್ ಮಹಮ್ಮದ್ ಅವರು ಕಳೆದ ತಿಂಗಳ 24 ರಂದು ಸಂಜೆ ಮಾವಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಹೈಟೆನ್ಷನ್ ತಂತಿ ತಗುಲಿ ಮರದಲ್ಲೇ ದಾರಣ ಸಾವನ್ನಪ್ಪಿದ್ದರು. ಅಗಲಿದ ಪ್ರೀತಿಯ ಉದ್ಯೋಗಿಯ ಸ್ಮರಣಾರ್ಥವಾಗಿ ಸಾಗರ್ ಕಲೆಕ್ಷನ್ ತೊಕ್ಕೊಟ್ಟು, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮತ್ತು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯ ರಕ್ತನಿಧಿ ಸಂಸ್ಥೆಯವರು ಜೊತೆ ಸೇರಿ ಇಂದು ತೊಕ್ಕೊಟ್ಟಿನಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು. ಶಿಬಿರದಲ್ಲಿ ಅನೇಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ರಕ್ತದಾನ ಮಾಡುವಂತೆ ಪ್ರೇರೇಪಿಸಲು ರಕ್ತದಾನಿಗಳಿಗೆ ಆಕರ್ಷಕ ಉಡುಗೊರೆಯನ್ನೂ ನೀಡಲಾಯಿತು.


ಸಾಗರ್ ಕಲೆಕ್ಷನ್ಸ್ ಪಾಲುದಾರ ಅಬ್ದುಲ್ ರಹಿಮಾನ್ ಮಾತನಾಡಿ ಇಲ್ಯಾಸ್ ಅವರು ಸ್ನೇಹಜೀವಿಯಲ್ಲದೆ, ಪರೋಪಕಾರಿಯಾಗಿದ್ದರು. ಅವರ ಹೆಸರಲ್ಲೇ ಜಾತಿ, ಧರ್ಮ ಮೀರಿ ಸಮಾಜಕ್ಕೆ ಅತ್ಯಗತ್ಯ ಇರುವ ರಕ್ತವನ್ನ ಕ್ರೋಢೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಹೇಳಿದರು.


ಸ್ಥಳೀಯ ಶಾಸಕ ಯು.ಟಿ ಖಾದರ್, ಉಳ್ಳಾಲ ದರ್ಗಾ ಅಧ್ಯಕ್ಷ ರಶೀದ್ ಹಾಜಿ, ಮಂಗಳೂರು ನಗರ ಡಿಸಿಪಿ ದಿನೇಶ್ ಕುಮಾರ್, ಬಿಜೆಪಿ ಮುಖಂಡ ಚಂದ್ರಹಾಸ್ ಉಳ್ಳಾಲ್, ಸಾಗರ್ ಕಲೆಕ್ಷನ್ ಪಾಲುದಾರ ಇಸ್ಮಾಯಿಲ್, ಸಮಾಜ ಸೇವಕರಾದ ಝಾಕಿರ್ ಇಕ್ಲಾಸ್ ಮೊದಲಾವರು ಉಪಸ್ಥಿತರಿದ್ದರು.
Ullal Youth dies of electrocution, family conduct mass blood camp on the day of his death anniversary.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm