ಬ್ರೇಕಿಂಗ್ ನ್ಯೂಸ್
25-07-22 10:26 pm Mangalore Correspondent ಕರಾವಳಿ
ಪುತ್ತೂರು, ಜುಲೈ 25 : ಕೃಷಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರಿನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿ ಸದಸ್ಯರು ಉತ್ತರ ಭಾರತಕ್ಕೆ ಮೋಜಿನ ಟೂರ್ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪ ಮಾಡಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಬ ತಾಲೂಕಿನ ಅಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಉತ್ತರ ಭಾರತಕ್ಕೆ ಅಧ್ಯಯನ ಪ್ರವಾಸ ಹೋಗಿದ್ದಾರೆ. ಆದರೆ ಪ್ರವಾಸಕ್ಕೆ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ ಕುಟುಂಬದ ಸದಸ್ಯರನ್ನೂ ಕರೆದೊಯ್ದಿದ್ದರು. ಸೊಸೈಟಿ ದುಡ್ಡಿನಲ್ಲಿ ಪತಿ- ಪತ್ನಿಯರು ಮೋಜು ನಡೆಸಿ ಬಂದಿದ್ದಾರೆ. ಅದರ ಫೋಟೊಗಳು ಕೂಡ ವೈರಲ್ ಆಗಿವೆ ಎಂದು ಹೇಳಿದ್ದಾರೆ.



ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು ಪ್ರವಾಸಿ ತಾಣಗಳನ್ನು ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ. ಕೃಷಿಕರ ದುಡ್ಡಿನಲ್ಲಿ ನಡೆಯುತ್ತಿರುವ ಸಹಕಾರಿ ಸಂಘ. ಆದರೆ ಇವರು ಕುತುಬ್ ಮಿನಾರ್ ಇನ್ನಿತರ ಪ್ರವಾಸಿ ತಾಣಗಳಿಗೆ ಹೋಗಿದ್ದಾರೆ. ಇವರ ಮೋಜಿನ ಪ್ರವಾಸಕ್ಕೆ ಸೊಸೈಟಿ ದುಡ್ಡನ್ನು ಹೇಗೆ ಬಳಸಿದ್ದಾರೆ ಎನ್ನುವ ಬಗ್ಗೆ ಕೃಷಿಕರು ಕೇಳುತ್ತಿದ್ದಾರೆ. ಒಂದು ವ್ಯವಸ್ಥೆಯನ್ನು ಹಾಳು ಗೆಡವುತ್ತಿರುವುದರ ಪ್ರತೀಕ ಈ ರೀತಿಯ ಮೋಜಿನ ಪ್ರವಾಸ. ಕೃಷಿಕರ ದುಡ್ಡನ್ನು ಪೋಲು ಮಾಡುತ್ತಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಆಪ್ ಪದಾಧಿಕಾರಿಗಳಾದ ಜನಾರ್ಧನ ಬಂಗೇರ, ಡಾ ವಿಷುಕುಮಾರ್ ಇದ್ದರು.
Puttur AAP sams Kadaba horticulture department director and members for making tour out state in peoples money.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm