ಕೆಲಸದ ಒತ್ತಡ ; ಕಾರ್ಕಳ ತಾಲೂಕು ಗ್ರಾಮ ಲೆಕ್ಕಾಧಿಕಾರಿ ಬಾವಿಗೆ ಬಿದ್ದು ಆತ್ಮಹತ್ಯೆ

25-07-22 10:58 pm       Udupi Correspondent   ಕರಾವಳಿ

ಕಾರ್ಕಳ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಸುಶ್ಮಿತಾ (26) ಭಾನುವಾರ ತಡರಾತ್ರಿ ವಾಸವಿದ್ದ ಕುಕ್ಕಂದೂರು ತಾಲೂಕು ಪಂಚಾಯತ್ ವಸತಿಗೃಹದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಾರ್ಕಳ, ಜುಲೈ 25: ಕಾರ್ಕಳ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಸುಶ್ಮಿತಾ (26) ಭಾನುವಾರ ತಡರಾತ್ರಿ ವಾಸವಿದ್ದ ಕುಕ್ಕಂದೂರು ತಾಲೂಕು ಪಂಚಾಯತ್ ವಸತಿಗೃಹದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಾರ್ಕಳದ ಪೆರ್ವಾಜೆಯವರಾದ ಅವಿವಾಹಿತೆ ಸುಶ್ಮಿತಾ ಹುಡ್ಕೋ ಭಾನುವಾರ ಕಾಲನಿಯ ಮನೆಯಲ್ಲಿ ತಂದೆ-ತಾಯಿ ಸಹೋದರನೊಂದಿಗೆ ವಾಸವಾಗಿದ್ದು, ಕಳೆದ ಆರು ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಕರ್ತವ್ಯದ ಒತ್ತಡದಿಂದ ಇದ್ದು, ಈ ಬಗ್ಗೆ ವೈದ್ಯರಲ್ಲಿ ಚಿಕಿತ್ಸೆಯನ್ನು ಪಡೆದಿದ್ದರು ಎಂದು ತಿಳಿದುಬಂದಿದೆ.

ಜು.24ರ ರಾತ್ರಿ ಊಟ ಮಾಡಿ ಮಲಗಿದ್ದು, 11ಗಂಟೆ ಸುಮಾರಿಗೆ ಕಾಣಿಸದೇ ಇದ್ದಾಗ ಹುಡುಕಾಡಿದಾಗ ವಸತಿಗೃಹದ ಬಾವಿ ಕಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿತ್ತು. ಬಳಿಕ ಅಗ್ನಿಶಾಮಕ ದಳದವರು ಬಂದು ಹುಡುಕಿದಾಗ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಕೆಲಸದ ಒತ್ತಡ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

26-year-old Karkala grama panchayat accountant commits suicide. It is said to due heavy work pressure she's taken the extreme step.