ಬ್ರೇಕಿಂಗ್ ನ್ಯೂಸ್
27-07-22 09:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ನಾವು ಮನೆಯ ಮಗನನ್ನು ಕಳೆದುಕೊಂಡಿದ್ದೇವೆ. ಘಟನೆ ಖಂಡಿಸಲು ನಮ್ಮಲ್ಲಿ ಪದಗಳಿಲ್ಲ. ಪ್ರಕರಣದಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ದೇಶದಲ್ಲಿ ಜಿಹಾದಿ ಮಾನಸಿಕತೆ ಹಬ್ಬುತ್ತಿದ್ದು ಅದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ. ನಾನೂ ಹಿಂದೂ ಸಂಘಟನೆಯಲ್ಲೇ ಬೆಳೆದು ಸಾರ್ವಜನಿಕ ಜೀವನಕ್ಕೆ ಬಂದವನು. ಕಾರ್ಯಕರ್ತನನ್ನು ಕಳೆದುಕೊಂಡಾಗ ಮತ್ತೊಬ್ಬ ಕಾರ್ಯಕರ್ತನಿಗೆ ಆಗುವ ಆಕ್ರೋಶ ನನಗೆ ಅರಿವಿದೆ. ಈ ರೀತಿಯ ಆಕ್ರೋಶವನ್ನು ನಾನೂ ಅನುಭವಿಸಿದ್ದೇನೆ.

ಆದರೆ ಕೊಲೆ ಮಾಡಿದ ಜಿಹಾದಿಗಳನ್ನು ಬಗ್ಗುಬಡಿದೇ ಬಡಿಯುತ್ತೇವೆ. ಹಾಗೇ ಬಿಡೋದಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಖ್ಯಮಂತ್ರಿಗಳಿಗೂ ನಿರಂತರ ಮಾಹಿತಿ ನೀಡುತ್ತಿದ್ದೇನೆ. ಮುಂದಿನೆರಡು ದಿನ ಮಂಗಳೂರಿನಲ್ಲೇ ಇದ್ದು ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ, ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ದೇಶದ ಉತ್ತರದಿಂದ ದಕ್ಷಿಣ ತುದಿ ವರೆಗೆ ನಡೆಯುತ್ತಿರುವ ಜಿಹಾದಿ ಮಾನಸಿಕತೆಯೇ ಪ್ರವೀಣ್ ಕೊಲೆಗೆ ಕಾರಣ. ಇದೇ ಜಿಹಾದಿ ಮಾನಸಿಕತೆಯೇ ಪ.ಬಂಗಾಳ, ಕೇರಳದಲ್ಲಿ ಕಾರ್ಯಕರ್ತರನ್ನು ಬಲಿ ಪಡೆಯುತ್ತಿದೆ.
ಹಾಗಂತ, ಪ್ರವೀಣ್ ಕೊಲೆ ವಿಚಾರವನ್ನು ಚುನಾವಣೆ ವಿಷಯವಾಗಿಸೋದಿಲ್ಲ. ಚುನಾವಣೆಗೆ ಬೇಕಾದ ವಿಷಯಗಳೇ ಬೇರೆ ಇದೆ. ಪ್ರವೀಣ್ ಕೊಲೆಯನ್ನು ಚುನಾವಣಾ ವಿಷಯ ಮಾಡುವ ಇರಾದೆ ಬಿಜೆಪಿಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
Jihadhi mindset is the reason for Praveens murder in Bellare, says Minister Sunil Kumar
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm