ಬ್ರೇಕಿಂಗ್ ನ್ಯೂಸ್
27-07-22 09:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ನಾವು ಮನೆಯ ಮಗನನ್ನು ಕಳೆದುಕೊಂಡಿದ್ದೇವೆ. ಘಟನೆ ಖಂಡಿಸಲು ನಮ್ಮಲ್ಲಿ ಪದಗಳಿಲ್ಲ. ಪ್ರಕರಣದಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ದೇಶದಲ್ಲಿ ಜಿಹಾದಿ ಮಾನಸಿಕತೆ ಹಬ್ಬುತ್ತಿದ್ದು ಅದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ. ನಾನೂ ಹಿಂದೂ ಸಂಘಟನೆಯಲ್ಲೇ ಬೆಳೆದು ಸಾರ್ವಜನಿಕ ಜೀವನಕ್ಕೆ ಬಂದವನು. ಕಾರ್ಯಕರ್ತನನ್ನು ಕಳೆದುಕೊಂಡಾಗ ಮತ್ತೊಬ್ಬ ಕಾರ್ಯಕರ್ತನಿಗೆ ಆಗುವ ಆಕ್ರೋಶ ನನಗೆ ಅರಿವಿದೆ. ಈ ರೀತಿಯ ಆಕ್ರೋಶವನ್ನು ನಾನೂ ಅನುಭವಿಸಿದ್ದೇನೆ.

ಆದರೆ ಕೊಲೆ ಮಾಡಿದ ಜಿಹಾದಿಗಳನ್ನು ಬಗ್ಗುಬಡಿದೇ ಬಡಿಯುತ್ತೇವೆ. ಹಾಗೇ ಬಿಡೋದಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಖ್ಯಮಂತ್ರಿಗಳಿಗೂ ನಿರಂತರ ಮಾಹಿತಿ ನೀಡುತ್ತಿದ್ದೇನೆ. ಮುಂದಿನೆರಡು ದಿನ ಮಂಗಳೂರಿನಲ್ಲೇ ಇದ್ದು ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ, ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ದೇಶದ ಉತ್ತರದಿಂದ ದಕ್ಷಿಣ ತುದಿ ವರೆಗೆ ನಡೆಯುತ್ತಿರುವ ಜಿಹಾದಿ ಮಾನಸಿಕತೆಯೇ ಪ್ರವೀಣ್ ಕೊಲೆಗೆ ಕಾರಣ. ಇದೇ ಜಿಹಾದಿ ಮಾನಸಿಕತೆಯೇ ಪ.ಬಂಗಾಳ, ಕೇರಳದಲ್ಲಿ ಕಾರ್ಯಕರ್ತರನ್ನು ಬಲಿ ಪಡೆಯುತ್ತಿದೆ.
ಹಾಗಂತ, ಪ್ರವೀಣ್ ಕೊಲೆ ವಿಚಾರವನ್ನು ಚುನಾವಣೆ ವಿಷಯವಾಗಿಸೋದಿಲ್ಲ. ಚುನಾವಣೆಗೆ ಬೇಕಾದ ವಿಷಯಗಳೇ ಬೇರೆ ಇದೆ. ಪ್ರವೀಣ್ ಕೊಲೆಯನ್ನು ಚುನಾವಣಾ ವಿಷಯ ಮಾಡುವ ಇರಾದೆ ಬಿಜೆಪಿಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
Jihadhi mindset is the reason for Praveens murder in Bellare, says Minister Sunil Kumar
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm