ಬ್ರೇಕಿಂಗ್ ನ್ಯೂಸ್
30-07-22 11:53 am Mangalore Correspondent ಕರಾವಳಿ
ಉಳ್ಳಾಲ, ಜು.30 : ಉಳ್ಳಾಲ ನಗರಸಭೆ ವ್ಯಾಪ್ತಿಯ ಕಲ್ಲಾಪು ಪಟ್ಲ ಎಂಬಲ್ಲಿ ಗುಡ್ಡ ಪ್ರದೇಶವನ್ನ ಸಮತಟ್ಟು ಮಾಡಲಾಗಿದ್ದು ನಸುಕಿನಲ್ಲಿ ಸುರಿದ ಭಾರೀ ಮಳೆಗೆ ನೀರೆಲ್ಲ ಸ್ಥಳೀಯ 18 ಮನೆಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ.
ಕಲ್ಲಾಪು ತಗ್ಗು ಪ್ರದೇಶವಾಗಿದ್ದು ನೇತ್ರಾವತಿ ನದಿ ಪಾತ್ರದಲ್ಲಿದೆ. ಇಲ್ಲಿ ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಸ್ಥಳೀಯ ನಿವಾಸಿಗಳು ಪ್ರತೀ ವರ್ಷವೂ ಕೃತಕ ನೆರೆ ಅವಾಂತರಗಳನ್ನು ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳು ಗಲ್ಲಿ, ಗಲ್ಲಿಗೆ ಸುಸಜ್ಜಿತ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಿದ್ದರೂ ನೀರು ಹರಿಯಲು ಸಮರ್ಪಕ ಚರಂಡಿಗಳನ್ನೇ ಒದಗಿಸಿಲ್ಲ. ಕಳೆದ ತಿಂಗಳಲ್ಲಿ ಸುರಿದ ಮೊದಲ ವರ್ಷಧಾರೆಗೆ ಕಲ್ಲಾಪು ಪ್ರದೇಶದ 50ಕ್ಕೂ ಹೆಚ್ಚು ಮನೆಗಳು ಕೃತಕ ನೆರೆಯಿಂದ ಜಲಾವೃತಗೊಂಡಿದ್ದವು.




ಇದೀಗ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಕಲ್ಲಾಪಿನ ಪಟ್ಲ, ಮುಡುಪ್ಪೋಡಿ ಪ್ರದೇಶದ ಸುಮಾರು 18 ಮನೆಗಳಿಗೆ ದಿಢೀರನೆ ನೀರು ನುಗ್ಗಿದ್ದು ಬೆಲೆ ಬಾಳುವ ಇನ್ವಾರ್ಟರ್, ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಪೀಠೋಪಕರಣಗಳು ಕೆಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಪಟ್ಲ, ಘಂಡಿ ಪ್ರದೇಶದ ಸ್ಥಳೀಯ ಕೌನ್ಸಿಲರ್ ಓರ್ವರಿಗೆ ಸೇರಿದ ಗುಡ್ಡ ಪ್ರದೇಶವನ್ನ ಸಮತಟ್ಟುಗೊಳಿಸಿದ್ದೇ ಈ ಅವಾಂತರಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಗುಡ್ಡ ಪ್ರದೇಶ ಸಮತಟ್ಟುಗೊಳಿಸಿದ್ದರಿಂದ ಅಲ್ಲಿನ ನೀರು ಹರಿದು ಹೋಗಲು ಚರಂಡಿ ಇಲ್ಲದೆ ರಸ್ತೆ ಮತ್ತು ಮನೆಗಳ ಒಳಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.



ಮಳೆ ನೀರು ಅವಾಂತರ ಸೃಷ್ಟಿಸಿದ ಪ್ರದೇಶಗಳು ಮೂರು ನಗರ ಸದಸ್ಯರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಸ್ಥಳೀಯ ಕೌನ್ಸಿಲರ್ ಮುಶ್ತಾಕ್ ಪಟ್ಲ ಅವರು ಮಾತ್ರ ಸ್ಥಳಕ್ಕೆ ಗ್ರಾಮಕರಣಿಕೆ ಶ್ವೇತ ಅವರೊಂದಿಗೆ ಭೇಟಿ ನೀಡಿ ನೀರು ಹರಿದು ಹೋಗಲು ಜೆಸಿಬಿ ಯಂತ್ರದಿಂದ ಕಾಮಗಾರಿ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ಕೊಡದೆ ಫೋನ್ ಕರೆಯನ್ನೂ ಸ್ವೀಕರಿಸದ ಕೌನ್ಸಿಲರ್ ಬಾಝಿಲ್ ಡಿಸೋಜ ಅವರಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
Thokottu Kallapu houses submerged with water, people face havoc after rains in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm