ಬ್ರೇಕಿಂಗ್ ನ್ಯೂಸ್
30-07-22 11:53 am Mangalore Correspondent ಕರಾವಳಿ
ಉಳ್ಳಾಲ, ಜು.30 : ಉಳ್ಳಾಲ ನಗರಸಭೆ ವ್ಯಾಪ್ತಿಯ ಕಲ್ಲಾಪು ಪಟ್ಲ ಎಂಬಲ್ಲಿ ಗುಡ್ಡ ಪ್ರದೇಶವನ್ನ ಸಮತಟ್ಟು ಮಾಡಲಾಗಿದ್ದು ನಸುಕಿನಲ್ಲಿ ಸುರಿದ ಭಾರೀ ಮಳೆಗೆ ನೀರೆಲ್ಲ ಸ್ಥಳೀಯ 18 ಮನೆಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ.
ಕಲ್ಲಾಪು ತಗ್ಗು ಪ್ರದೇಶವಾಗಿದ್ದು ನೇತ್ರಾವತಿ ನದಿ ಪಾತ್ರದಲ್ಲಿದೆ. ಇಲ್ಲಿ ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಸ್ಥಳೀಯ ನಿವಾಸಿಗಳು ಪ್ರತೀ ವರ್ಷವೂ ಕೃತಕ ನೆರೆ ಅವಾಂತರಗಳನ್ನು ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳು ಗಲ್ಲಿ, ಗಲ್ಲಿಗೆ ಸುಸಜ್ಜಿತ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಿದ್ದರೂ ನೀರು ಹರಿಯಲು ಸಮರ್ಪಕ ಚರಂಡಿಗಳನ್ನೇ ಒದಗಿಸಿಲ್ಲ. ಕಳೆದ ತಿಂಗಳಲ್ಲಿ ಸುರಿದ ಮೊದಲ ವರ್ಷಧಾರೆಗೆ ಕಲ್ಲಾಪು ಪ್ರದೇಶದ 50ಕ್ಕೂ ಹೆಚ್ಚು ಮನೆಗಳು ಕೃತಕ ನೆರೆಯಿಂದ ಜಲಾವೃತಗೊಂಡಿದ್ದವು.




ಇದೀಗ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಕಲ್ಲಾಪಿನ ಪಟ್ಲ, ಮುಡುಪ್ಪೋಡಿ ಪ್ರದೇಶದ ಸುಮಾರು 18 ಮನೆಗಳಿಗೆ ದಿಢೀರನೆ ನೀರು ನುಗ್ಗಿದ್ದು ಬೆಲೆ ಬಾಳುವ ಇನ್ವಾರ್ಟರ್, ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಪೀಠೋಪಕರಣಗಳು ಕೆಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಪಟ್ಲ, ಘಂಡಿ ಪ್ರದೇಶದ ಸ್ಥಳೀಯ ಕೌನ್ಸಿಲರ್ ಓರ್ವರಿಗೆ ಸೇರಿದ ಗುಡ್ಡ ಪ್ರದೇಶವನ್ನ ಸಮತಟ್ಟುಗೊಳಿಸಿದ್ದೇ ಈ ಅವಾಂತರಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಗುಡ್ಡ ಪ್ರದೇಶ ಸಮತಟ್ಟುಗೊಳಿಸಿದ್ದರಿಂದ ಅಲ್ಲಿನ ನೀರು ಹರಿದು ಹೋಗಲು ಚರಂಡಿ ಇಲ್ಲದೆ ರಸ್ತೆ ಮತ್ತು ಮನೆಗಳ ಒಳಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.



ಮಳೆ ನೀರು ಅವಾಂತರ ಸೃಷ್ಟಿಸಿದ ಪ್ರದೇಶಗಳು ಮೂರು ನಗರ ಸದಸ್ಯರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಸ್ಥಳೀಯ ಕೌನ್ಸಿಲರ್ ಮುಶ್ತಾಕ್ ಪಟ್ಲ ಅವರು ಮಾತ್ರ ಸ್ಥಳಕ್ಕೆ ಗ್ರಾಮಕರಣಿಕೆ ಶ್ವೇತ ಅವರೊಂದಿಗೆ ಭೇಟಿ ನೀಡಿ ನೀರು ಹರಿದು ಹೋಗಲು ಜೆಸಿಬಿ ಯಂತ್ರದಿಂದ ಕಾಮಗಾರಿ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ಕೊಡದೆ ಫೋನ್ ಕರೆಯನ್ನೂ ಸ್ವೀಕರಿಸದ ಕೌನ್ಸಿಲರ್ ಬಾಝಿಲ್ ಡಿಸೋಜ ಅವರಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
Thokottu Kallapu houses submerged with water, people face havoc after rains in Mangalore.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm