ಬ್ರೇಕಿಂಗ್ ನ್ಯೂಸ್
 
            
                        30-07-22 11:53 am Mangalore Correspondent ಕರಾವಳಿ
 
            ಉಳ್ಳಾಲ, ಜು.30 : ಉಳ್ಳಾಲ ನಗರಸಭೆ ವ್ಯಾಪ್ತಿಯ ಕಲ್ಲಾಪು ಪಟ್ಲ ಎಂಬಲ್ಲಿ ಗುಡ್ಡ ಪ್ರದೇಶವನ್ನ ಸಮತಟ್ಟು ಮಾಡಲಾಗಿದ್ದು ನಸುಕಿನಲ್ಲಿ ಸುರಿದ ಭಾರೀ ಮಳೆಗೆ ನೀರೆಲ್ಲ ಸ್ಥಳೀಯ 18 ಮನೆಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ.
ಕಲ್ಲಾಪು ತಗ್ಗು ಪ್ರದೇಶವಾಗಿದ್ದು ನೇತ್ರಾವತಿ ನದಿ ಪಾತ್ರದಲ್ಲಿದೆ. ಇಲ್ಲಿ ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಸ್ಥಳೀಯ ನಿವಾಸಿಗಳು ಪ್ರತೀ ವರ್ಷವೂ ಕೃತಕ ನೆರೆ ಅವಾಂತರಗಳನ್ನು ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳು ಗಲ್ಲಿ, ಗಲ್ಲಿಗೆ ಸುಸಜ್ಜಿತ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಿದ್ದರೂ ನೀರು ಹರಿಯಲು ಸಮರ್ಪಕ ಚರಂಡಿಗಳನ್ನೇ ಒದಗಿಸಿಲ್ಲ. ಕಳೆದ ತಿಂಗಳಲ್ಲಿ ಸುರಿದ ಮೊದಲ ವರ್ಷಧಾರೆಗೆ ಕಲ್ಲಾಪು ಪ್ರದೇಶದ 50ಕ್ಕೂ ಹೆಚ್ಚು ಮನೆಗಳು ಕೃತಕ ನೆರೆಯಿಂದ ಜಲಾವೃತಗೊಂಡಿದ್ದವು.




ಇದೀಗ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಕಲ್ಲಾಪಿನ ಪಟ್ಲ, ಮುಡುಪ್ಪೋಡಿ ಪ್ರದೇಶದ ಸುಮಾರು 18 ಮನೆಗಳಿಗೆ ದಿಢೀರನೆ ನೀರು ನುಗ್ಗಿದ್ದು ಬೆಲೆ ಬಾಳುವ ಇನ್ವಾರ್ಟರ್, ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಪೀಠೋಪಕರಣಗಳು ಕೆಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಪಟ್ಲ, ಘಂಡಿ ಪ್ರದೇಶದ ಸ್ಥಳೀಯ ಕೌನ್ಸಿಲರ್ ಓರ್ವರಿಗೆ ಸೇರಿದ ಗುಡ್ಡ ಪ್ರದೇಶವನ್ನ ಸಮತಟ್ಟುಗೊಳಿಸಿದ್ದೇ ಈ ಅವಾಂತರಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಗುಡ್ಡ ಪ್ರದೇಶ ಸಮತಟ್ಟುಗೊಳಿಸಿದ್ದರಿಂದ ಅಲ್ಲಿನ ನೀರು ಹರಿದು ಹೋಗಲು ಚರಂಡಿ ಇಲ್ಲದೆ ರಸ್ತೆ ಮತ್ತು ಮನೆಗಳ ಒಳಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.



ಮಳೆ ನೀರು ಅವಾಂತರ ಸೃಷ್ಟಿಸಿದ ಪ್ರದೇಶಗಳು ಮೂರು ನಗರ ಸದಸ್ಯರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಸ್ಥಳೀಯ ಕೌನ್ಸಿಲರ್ ಮುಶ್ತಾಕ್ ಪಟ್ಲ ಅವರು ಮಾತ್ರ ಸ್ಥಳಕ್ಕೆ ಗ್ರಾಮಕರಣಿಕೆ ಶ್ವೇತ ಅವರೊಂದಿಗೆ ಭೇಟಿ ನೀಡಿ ನೀರು ಹರಿದು ಹೋಗಲು ಜೆಸಿಬಿ ಯಂತ್ರದಿಂದ ಕಾಮಗಾರಿ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ಕೊಡದೆ ಫೋನ್ ಕರೆಯನ್ನೂ ಸ್ವೀಕರಿಸದ ಕೌನ್ಸಿಲರ್ ಬಾಝಿಲ್ ಡಿಸೋಜ ಅವರಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
 
            
            
            Thokottu Kallapu houses submerged with water, people face havoc after rains in Mangalore.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm