ಬ್ರೇಕಿಂಗ್ ನ್ಯೂಸ್
30-07-22 09:13 pm Mangalore Correspondent ಕರಾವಳಿ
ಸುಳ್ಯ, ಜುಲೈ 30 : ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಬೆಳ್ಳಾರೆಯಲ್ಲಿ ವರ್ಷದ ಹಿಂದೆ ಮುಸ್ಲಿಮರಿಗೆ ಸಡ್ಡು ಹೊಡೆದು ಕೋಳಿ ಅಂಗಡಿ ಆರಂಭಿಸಿದ್ದೂ ಪ್ರವೀಣ್ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗುವಂತಾಗಿತ್ತು ಅನ್ನೋದನ್ನು ಆತನ ಸ್ನೇಹಿತರು ಹೇಳುತ್ತಾರೆ.
ಪ್ರವೀಣ್ ನೆಟ್ಟಾರು ಅವರು ಒಂಬತ್ತು ತಿಂಗಳ ಹಿಂದೆ ಬೆಳ್ಳಾರೆಯಲ್ಲಿ 'ಅಕ್ಷಯ ಫಾರ್ಮ್ ಫ್ರೆಶ್ ಚಿಕನ್' ಎಂಬ ಕೋಳಿ ಅಂಗಡಿ ಆರಂಭಿಸಿದ್ದರು. ಉದ್ಯಮದಲ್ಲಿ ಅವರು ಯಶಸ್ವಿಯಾಗಿದ್ದು ಅಲ್ಲಿನ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ಪ್ರವೀಣ್ ಅವರ ಮಾವನ ಮಗ ರಂಜಿತ್ ಹೇಳಿದ್ದಾರೆ.

ಅಲ್ಲದೆ, ಪ್ರವೀಣ್ ರಾಷ್ಟ್ರೀಯವಾದಿ ಚಿಂತನೆಗೆ ಸಂಬಂಧಿಸಿದ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಇಂತಹ ಸಂದೇಶಗಳನ್ನು ಹಂಚಿಕೊಳ್ತಿದ್ದುದಕ್ಕೂ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು. ಕೆಲ ದಿನಗಳ ಹಿಂದೆಯೂ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಿದ್ದರು ಎಂದಿದ್ದಾರೆ.
ಇತ್ತೀಚೆಗೆ ಹಿಂದುಗಳು ಅನ್ಯಧರ್ಮೀಯರಿಂದ ಮಾಂಸ ಖರೀದಿಸಬಾರದು ಎಂಬ ಕುರಿತು ದೊಡ್ಡ ಮಟ್ಟದ ಅಭಿಯಾನ ನಡೆದಿತ್ತು. ಈ ಕುರಿತು ಸ್ಥಳೀಯರಲ್ಲಿ ಪ್ರವೀಣ್ ಜಾಗೃತಿ ಮೂಡಿಸುತ್ತಿದ್ದರು. ಹಿಂದೂಗಳು ಮೀನು ಮಾರಾಟ ನಡೆಸಲು, ಕೋಳಿ ಮಾಂಸದ ಮಳಿಗೆಗಳನ್ನು ಆರಂಭಿಸಲು ಹುರಿದುಂಬಿಸಿದ್ದರು. ಇದರಿಂದ ಪ್ರವೀಣ್ ಸ್ಥಳೀಯ ಕೆಲವರ ವಿರೋಧಕ್ಕೆ ಕಾರಣವಾಗಿದ್ದರು ಎಂದವರು ಹೇಳಿದರು.
ಬೆಳ್ಳಾರೆಯಲ್ಲಿ ಕೋಳಿ ಮಾಂಸದ ವ್ಯಾಪಾರ ಮೊದಲಿನಿಂದಲೂ ಅನ್ಯಧರ್ಮೀಯರ ಹತೋಟಿಯಲ್ಲಿತ್ತು. ಆದರೆ ಪ್ರವೀಣ್ ಅವರು ಸ್ವತಃ ಕೋಳಿ ವ್ಯಾಪಾರ ಆರಂಭಿಸಿ ಅವರಿಗೆ ಸೆಡ್ಡು ಹೊಡೆದಿದ್ದರು. ಯಾರು ಎಷ್ಟೇ ಅಡ್ಡಿಪಡಿಸಿದರೂ ಉದ್ಯಮದಲ್ಲಿ ಯಶಸ್ವಿಯೂ ಆಗಿದ್ದರು. ಇವರಿಂದ ಪ್ರೇರಣೆ ಪಡೆದು ಆಸುಪಾಸಿನಲ್ಲಿ ಅನೇಕ ಕಡೆ ಹಿಂದೂ ಯುವಕರು ಕೋಳಿ ವ್ಯಾಪಾರ ಆರಂಭಿಸಿದ್ದರು ಎಂದವರು ತಿಳಿಸಿದರು.
'ಈ ಕಾರಣಕ್ಕಾಗಿಯೇ ಪ್ರವೀಣ್ ಹತ್ಯೆ ನಡೆದಿರುವ ಸಾಧ್ಯತೆ ಅಧಿಕ. ಪೊಲೀಸರು ಈಗ ಬಂಧಿಸಿರುವ ಝಾಕೀರ್ ಮತ್ತು ಶಫೀಕ್ ಪ್ರಮುಖ ಆರೋಪಿಗಳಲ್ಲ. ಇವರ ಹಿಂದೆ ದೊಡ್ಡ ಜಾಲವಿದೆ ಎಂದು ರಂಜಿತ್ ಅನುಮಾನ ವ್ಯಕ್ತಪಡಿಸುತ್ತಾರೆ.
Praveen Bellare Murder was it due to his chicken shop set up, friends allege business was the reason.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm