ಬ್ರೇಕಿಂಗ್ ನ್ಯೂಸ್
03-10-20 12:27 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03: ತಮ್ಮ ಜೀವ ಪಣಕ್ಕಿಟ್ಟು ಸಮುದ್ರದಲ್ಲಿ ಮೀನು ಹಿಡಿಯುವುದನ್ನೇ ವೃತ್ತಿಯಾಗಿಸಿಕೊಂಡವರು ಬೆಸ್ತರು. ಮೊಗವೀರ ಸಮುದಾಯದ ಶ್ರಮ ಜೀವನಕ್ಕೆ ಯಾವುದೇ ರೀತಿಯಲ್ಲು ಬೆಲೆ ಕಟ್ಟಲಾಗದು. ಇದೇ ಆಶಯದ ಹಿನ್ನೆಲೆಯಲ್ಲಿ ಮೀನು ವ್ಯಾಪಾರದ ವೃತ್ತಿ ಮಾಡುವ ಮಹಿಳೆಯ ಚಿತ್ರವನ್ನು ಕಲಾವಿದರು ಉರ್ವ ಮೀನು ಮಾರ್ಕೆಟ್ ಗೋಡೆಯಲ್ಲಿ ಚಿತ್ರಿಸಿದ್ದು ಈಗ ಸಾರ್ವಜನಿಕರ ಆಕರ್ಷಣೆಗೆ ಕಾರಣವಾಗಿದೆ.
ಮಂಗಳೂರಿನ ಪಿಕ್ಸಿನ್ಸಿಲ್ ಎನ್ನುವ ಕಲಾವಿದರ ತಂಡ, ಮೊಗವೀರ ಸಮುದಾಯದ ಶ್ರಮ ಜೀವನವನ್ನು ನಾಗರಿಕ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಉರ್ವ ಮೀನು ಮಾರುಕಟ್ಟೆಯ ಗೋಡೆಯಲ್ಲಿ ಅಲ್ಲಿಯೇ ಮೀನು ಮಾರಾಟ ಮಾಡುವ ಮಹಿಳೆಯ ಚಿತ್ರವನ್ನು ರಚಿಸಿ ಗಮನ ಸೆಳೆದಿದ್ದಾರೆ.





ಉರ್ವದಲ್ಲಿ ಮೀನು ಮಾರಾಟ ಮಾಡುವ ಹಿರಿಯ ಮಹಿಳೆಯೊಬ್ಬರ ಚಿತ್ರ ಇದಾಗಿದ್ದು, ಮೊಬೈಲ್ನಲ್ಲಿ ಫೋಟೊ ತೆಗೆದು ಅದನ್ನು ನೋಡಿಯೇ ಗೋಡೆಯಲ್ಲಿ ಚಿತ್ರಿಸಲಾಗಿದೆ. ತನ್ನ ಚಿತ್ರವನ್ನು ನೋಡಿದ ಆ ಮಹಿಳೆ ಕೂಡ ಸಂಭ್ರಮಿಸಿದ್ದಾರೆ. ಚಿತ್ರದಲ್ಲಿ ಮೀನು ಕಾರ್ಮಿಕ ಮಹಿಳೆಯ ಬಗ್ಗೆ ಕಾಳಜಿ ಹಾಗೂ ಮೀನಿನ ಬಗ್ಗೆ ಜಾಗೃತಿಯನ್ನು ಬಣ್ಣಗಳಲ್ಲಿ ಚಿತ್ರಿಸಲಾಗಿದೆ.
ಇದೇ ರೀತಿ ಹಿರಿಯ ನಾಗರಿಕರೊಬ್ಬರ ಫೋಟೋ ತೆಗೆದು, ಅದನ್ನು ಉರ್ವಾ ಚಿಲಿಂಬಿಯಲ್ಲಿ ರಸ್ತೆ ಬದಿಯ ಗೋಡೆಯಲ್ಲಿ ಚಿತ್ರಿಸಲಾಗಿದೆ. ಇದರಲ್ಲಿ ಯುವ ಜನರನ್ನು ಉದ್ದೇಶಿಸಿ, ‘ಇಟ್ಸ್ ಯೂ ಟುಮಾರೊ’ ಎಂದು ಸಂದೇಶ ಬರೆಯಲಾಗಿದೆ. ಯಾರೂ ಹಿರಿಯರನ್ನು ಕಡೆಗಣಿಸದಿರಿ, ನಾಳೆ ನೀವೂ ಹಿರಿಯರ ಸ್ಥಾನಕ್ಕೆ ಹೋಗಲಿದ್ದೀರಿ ಎಂಬ ಚಿತ್ರಣವನ್ನು ಕೊಡಲಾಗಿದೆ. ಪೃಥ್ವಿರಾಜ್ ಮರೋಳಿ ನೇತೃತ್ವದ ಕಲಾವಿದರ ತಂಡದಲ್ಲಿ ಅಜೇಶ್ ಸಜಿಪ, ನಿತೇಶ್ ಕನ್ಯಾಡಿ, ವಿನೋದ್ ಚಿಲಿಂಬಿ ಹಾಗೂ ಅಭಿಜಿತ್ ದೇವಾಡಿಗ ಇದ್ದಾರೆ. ಈ ಚಿತ್ರಗಳನ್ನು ವೀಕ್ಷಿಸಿದ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.
ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಗಳನ್ನು ಅಲ್ಲಲ್ಲಿ ರಚಿಸುತ್ತಿದ್ದೇವೆ. ಉರ್ವದಲ್ಲಿ ಮೀನು ಮಾರುವ ಮಹಿಳೆಯ ಚಿತ್ರವನ್ನು ಮೂರು ದಿನದಲ್ಲಿ ಪೂರ್ಣಗೊಳಿಸಿದ್ದೇವೆ. ಒಂದೊಂದು ಕಡೆ ಹೊಸ ಪರಿಕಲ್ಪನೆಯೊಂದಿಗೆ ಚಿತ್ರ ಮಾಡುತ್ತಿದ್ದೇವೆ ಎಂದು ಕಲಾವಿದ ಪೃಥ್ವಿರಾಜ್ ತಿಳಿಸಿದ್ದಾರೆ.
Video:
For More Photos: Photo Gallery:
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm