ಬ್ರೇಕಿಂಗ್ ನ್ಯೂಸ್
01-08-22 06:44 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 1 : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಕೇರಳದ ತಲಶ್ಶೇರಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಗೆ ತೆರಳಿದ್ದ ವಿಶೇಷ ತಂಡವೊಂದು ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು ಸುಳ್ಯಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ನೇತೃತ್ವದ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ ಹತ್ಯೆ ನಂತರ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಕೇರಳ, ಗೋವಾ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಪೊಲೀಸರ ತಂಡ ತೆರಳಿ ಆರೋಪಿಗಳಿಗಾಗಿ ಬಲೆ ಬೀಸಿದ್ದವು. ಪ್ರಕರಣದಲ್ಲಿ ಇಬ್ಬರನ್ನು ಮಾತ್ರ ಬಂಧಿಸಿದ್ದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ. ಉಳಿದವರನ್ನು ಬಂಧನ ತೋರಿಸದೆ ವಶದಲ್ಲಿಟ್ಟುಕೊಂಡಿದ್ದಾರೆ.

ಆರೋಪಿಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು ಅವರಿಂದಲೇ ಮಾಹಿತಿ ಸಂಗ್ರಹಿಸಿ ಪ್ರಕರಣದ ಜಾಡು ಹತ್ತಿದ್ದಾರೆ. ಇದೇ ವೇಳೆ, ಬೆಂಗಳೂರಿನ ಎನ್ಐಎ ಅಧಿಕಾರಿಗಳ ತಂಡ ಸುಳ್ಯಕ್ಕೆ ಆಗಮಿಸಿದ್ದು ಮಾಹಿತಿ ಸಂಗ್ರಹ ಆರಂಭಿಸಿದೆ. ಅಧಿಕೃತವಾಗಿ ಪ್ರಕರಣ ಹಸ್ತಾಂತರ ಆಗದಿದ್ದರೂ, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎನ್ಐಎ ತನಿಖೆ ಆರಂಭಿಸಿದೆ. ಸೋಮವಾರ ಸಂಜೆ ಅಧಿಕಾರಿಗಳ ತಂಡ ಖಾಸಗಿ ಸ್ಕಾರ್ಪಿಯೋ ವಾಹನದಲ್ಲಿ ಬೆಳ್ಳಾರೆಗೆ ಆಗಮಿಸಿದ್ದು ಕೊಲೆ ಕೃತ್ಯ ನಡೆದ ಜಾಗದ ಪರಿಶೀಲನೆ ನಡೆಸಿದೆ.
Praveen Bellare Murder, other two accused arrested from Bangalore, totally four have been arrested in this case. NIA who has arrived at Sullia has now started an investigation.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm