ಬ್ರೇಕಿಂಗ್ ನ್ಯೂಸ್
04-08-22 01:16 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮತ್ತೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರಿನಲ್ಲಿ ಅತಿ ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲ್ಪಟ್ಟಿರುವ ಸುರತ್ಕಲ್ ಪೇಟೆ ಮತ್ತು ಕಾಟಿಪಳ್ಳ ಪ್ರದೇಶಗಳಿಗೆ ತೆರಳಿ ಅಲ್ಲಿ ಸಾರ್ವಜನಿಕರನ್ನು ಮಾತನಾಡಿಸಿದ್ದಾರೆ.
ಅಂಗಡಿಗಳು, ವ್ಯಾಪಾರ ಸಂಕೀರ್ಣಗಳಿಗೂ ತೆರಳಿ ಸಾಮಾನ್ಯ ಜನರ ಜೊತೆ ಸಂವಹನ ನಡೆಸಿದ್ದಾರೆ. ಅಲ್ಲದೆ, ಅಲ್ಲಿ ನಿಯೋಜನೆಗೊಂಡ ಪೊಲೀಸರ ಜೊತೆಗೂ ಮಾತುಕತೆ ನಡೆಸಿದ್ದಾರೆ. ಪೊಲೀಸರನ್ನು ಅಲರ್ಟ್ ಇರುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದರೂ, ಅಹಿತಕರ ಘಟನೆಗಳಿಗೆ ಪ್ರಯತ್ನ ನಡೆಯುತ್ತಿದೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಒಂದೇ ವಾರದಲ್ಲಿ ಎರಡನೇ ಬಾರಿಗೆ ಎಡಿಜಿಪಿ ಭೇಟಿ ನೀಡಿದ್ದಾರೆ.













ಇದಲ್ಲದೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಪೊಲೀಸರನ್ನು ಅಲರ್ಟ್ ಇರುವಂತೆ ಎಡಿಜಿಪಿ ಸೂಚನೆ ನೀಡಿದ್ದಾರೆ. ಇಂದು ಮಂಗಳೂರಿನ ಕಮಿಷನರೇಟ್ ಕಚೇರಿಯಲ್ಲಿ ಎರಡು ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಎಡಿಜಿಪಿ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂಬ ಸೂಚನೆ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕೊಲೆ ಪ್ರಕರಣದ ಬಗ್ಗೆಯೂ ತನಿಖಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇದರ ನಡುವೆಯೇ, ಎಡಿಜಿಪಿ ಅಲೋಕ್ ಕುಮಾರ್ ಬೆಳಗ್ಗೆ ದಿಢೀರ್ ಆಗಿ ಮಂಗಳೂರು ಜೈಲಿಗೂ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ. ಎರಡೂ ಪ್ರಕರಣದ ಆರೋಪಿಗಳನ್ನು ಮಂಗಳೂರಿನ ಜೈಲಿನಲ್ಲಿ ಇರಿಸಲಾಗಿದ್ದು, ಅವರ ಬಗ್ಗೆ ನಿಗಾ ಇರಿಸುವಂತೆ ಜೈಲಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.
Additional director general of police (ADGP) Law and Order, Alok Kumar visited several areas of Surathkal and Bajpe police station limits.During his visit, he also interacted with the police personnel and general public. He gathered details about the situation from the senior officials. Later, the ADGP held a meeting with the senior police officials to review the situation of law and order and preparedness for restoration of normalcy under Mangaluru city police commissionerate and Dakshina Kannada police limits.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm