ಬ್ರೇಕಿಂಗ್ ನ್ಯೂಸ್
04-08-22 01:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಅಹಿತಕರ ಘಟನೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು. ಹೊಸ ನಿಯಮ ಆಗಸ್ಟ್ 5ರಿಂದಲೇ ಜಾರಿಗೆ ಬರಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಸಮಾಲೋಚನೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಾಳೆಯಿಂದಲೇ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಆದರೆ, ಈ ನಿಯಮದಿಂದ 18 ವರ್ಷದಿಂದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ವಿನಾಯ್ತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಹಿಂಬದಿ ಸವಾರರಾಗಿ ಯುವಕರು ದ್ವಿಚಕ್ರ ವಾಹನದಲ್ಲಿ ತೆರಳುವಂತಿಲ್ಲ. ಸದ್ಯಕ್ಕೆ ಒಂದು ವಾರ ಅಥವಾ ಹತ್ತು ದಿವಸ ಈ ನಿಯಮ ಜಾರಿಯಲ್ಲಿರುತ್ತದೆ. ಹಿಂದೆ ಬೇರೆ ರಾಜ್ಯದಲ್ಲಿ ಈ ರೀತಿಯ ನಿಮಯ ಜಾರಿಗೆ ತರಲಾಗಿತ್ತು. ಕೇರಳದ ವಯನಾಡಿನಲ್ಲೂ ಈ ರೀತಿ ನಿಯಮ ತರಲಾಗಿತ್ತು. ಈ ರೀತಿ ಮಾಡುವುದರಿಂದ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಬಹುದು ಎಂದು ಎಡಿಜಿಪಿ ಹೇಳಿದ್ದಾರೆ. ಅಲ್ಲದೆ, ರಾತ್ರಿ ನಿರ್ಬಂಧ ಸಡಿಲಗೊಳಿಸುತ್ತೀರಾ ಎಂಬ ಪ್ರಶ್ನೆಗೆ, ಇಲ್ಲ. ಒಂದೇ ಬಾರಿಗೆ ನಿರ್ಬಂಧ ಸಡಿಲಿಸುವುದಿಲ್ಲ. ಅದರ ಸಮಯ ಮಿತಿಯನ್ನು ಸ್ವಲ್ಪ ಬದಲು ಮಾಡಲಾಗುವುದು. ರಾತ್ರಿ ನಿರ್ಬಂಧ ಮತ್ತು 144 ಸೆಕ್ಷನ್ ಮುಂದುವರಿಸಲಾಗುವುದು ಎಂದು ಹೇಳಿದರು.
ADGP Alok Kumar orders for No pillon riders on bike from August 5th in Mangalore to avoid untold incidents in Dakshina Kannada. As miscreants use bike for attacks and murder to prevent this this order has been placed as Mangalore witnessed three murders in 10 days time.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm