ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm