ಬ್ರೇಕಿಂಗ್ ನ್ಯೂಸ್
05-08-22 01:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 5 : ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ತಾಲೂಕಿನಲ್ಲಿ ನಾಲ್ಕು ಗ್ರಾಮಗಳ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಜಲಸ್ಫೋಟ ಉಂಟಾಗಿದ್ದು, ಮನೆ, ಕೃಷಿ ಜಮೀನುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.
ಸುಳ್ಯ ಹಾಗೂ ಕಡಬ ತಾಲೂಕಿನ ಕಾಳಜಿ ಕೇಂದ್ರಗಳಲ್ಲಿ ಒಟ್ಟು 58 ಮಂದಿ ಆಶ್ರಯ ಪಡೆದಿದ್ದಾರೆ. ಕಲ್ಮಕಾರು ಸಕಾ೯ರಿ ಪ್ರಾಥಮಿಕ ಶಾಲೆಯಲ್ಲಿ 21 ಮಂದಿ, ಸಂಪಾಜೆಯ ಸಜ್ಜನ ಪ್ರತಿಷ್ಠಾನದಲ್ಲಿ 12 ಮಂದಿ, ಸುಬ್ರಹ್ಮಣ್ಯದ ಅನಘಾ ವಸತಿಗೃಹದಲ್ಲಿ 13 ಮಂದಿ, ಯೇನೆಕಲ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 6 ಮಂದಿ ಇದ್ದಾರೆ ಎಂದು ತಾಲ್ಲೂಕು ಆಡಳಿತ ಮಾಹಿತಿ ನೀಡಿದೆ.
ನಿರಂತರ ಮಳೆಯಿಂದಾಗಿ ಮಡಪ್ಪಾಡಿಯಲ್ಲಿ ಅಪಾರ ಹಾನಿ ಸಂಭವಿಸಿದೆ. ಮಡಪ್ಪಾಡಿಯ ಗೋಳಿಯಡಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದು ಬ್ಲಾಕ್ ಆಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಡಪ್ಪಾಡಿಯಿಂದ ಶೀರಡ್ಕ, ದೇರಮಜಲು ಸಂಪರ್ಕಿಸುವ ರಸ್ತೆಯಲ್ಲಿ ಅಂಬೆಕಲ್ಲು ಎಂಬಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕದ ಪರಿಸ್ಥಿತಿ ಎದುರಾಗಿದೆ. ಹಾಡಿಕಲ್ಲು ಎಂಬಲ್ಲಿ ಸೇತುವೆ ಪಕ್ಕದ ಮಣ್ಣು ಕೊಚ್ಚಿ ಹೋಗಿದ್ದು, ಅಲ್ಲಿಯೇ ಮನೆಯೊಂದು ಕುಸಿವ ಭೀತಿಯಲ್ಲಿದೆ. ಪೂಂಬಾಡಿಯನ್ನು ಸಂಪರ್ಕಿಸುವ ಶೆಟ್ಟಿಮಜಲು ಸೇತುವೆ ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿದೆ. ಜಾಲುಮನೆ ಎಂಬಲ್ಲಿಯೂ ಸೇತುವೆಯ ಮಣ್ಣು ಕೊಚ್ಚಿ ಹೋಗಿದೆ.
Heavy rains in Sullia, 58 people transferred to a safer place. Wednesday extended holiday to some education institutes in Sullia taluk on Thursday, in view of continuing torrential rain in the taluk.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm